ನವದೆಹಲಿ: ಕೊರೋನಾ ಲಸಿಕೆ ಲಭ್ಯವಾದ ತಕ್ಷಣ ವಿತರಣೆ ಮಾಡಲು ಪೂರಕವಾಗುವಂತೆ ಆದ್ಯತಾ ವಲಯವನ್ನು ಕೇಂದ್ರ ಸರ್ಕಾರ ಗುರುತಿಸಿದೆ. ವಿಶೇಷ ಕೊರೋನಾ ಲಸಿಕೆ ಕಾರ್ಯಕ್ರಮದಲ್ಲಿ 30 ಕೋಟಿ ಜನರಿಗೆ ಲಸಿಕೆ ನೀಡಲು ಮೊದಲ ಹಂತದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾಹಿತಿ ನೀಡಿದೆ.
ಔಷಧ ತಯಾರಿಕಾ ಸಂಸ್ಥೆಗಳಿಂದ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿ ಮಾಡಲಿದೆ. ಮೊದಲಿಗೆ ಆದ್ಯತಾ ವಲಯದಲ್ಲಿ ಗುರುತಿಸಲಾದವರಿಗೆ ಇದನ್ನು ಉಚಿತವಾಗಿ ನೀಡಲಾಗುತ್ತದೆ. ಇದನ್ನು ಪ್ರಸ್ತುತ ದೇಶದಲ್ಲಿ ಇತರ ಲಸಿಕೆಗಳನ್ನು ವಿತರಣೆ ನಡೆಸುತ್ತಿರುವ ವಿಧಾನವನ್ನೇ ಅನುಸರಿಸಿ ವಿತರಣೆ ಮಾಡಲಾಗುತ್ತದೆ ಎಂದೂ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಜೊತೆಗೆ ತಮ್ಮದೇ ಆದ ಖರೀದಿ ವಿಧಾನ ರೂಪಿಸದಂತೆಯೂ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ನ ಮೂರನೇ ಹಂತದ ಪ್ರಯೋಗ 60% ರಷ್ಟು ಪರಿಣಾಮಕಾರಿಯಾಗಿರಲಿದೆ ಎಂದೂ ಕೇಂದ್ರ ಹೇಳಿದೆ. ಈ ಲಸಿಕೆಯನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡಲಾಗುವುದು ಎಂದೂ ಸರ್ಕಾರ ಹೇಳಿದೆ. ಜೊತೆಗೆ ನವೆಂಬರ್ ಮಧ್ಯದೊಳಗೆ ರಾಜ್ಯಗಳು ಆದ್ಯತಾ ಪಟ್ಟಿಯನ್ನು ಕಳುಹಿಸಬೇಕು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು.
ಈ ಲಸಿಕೆಯ ವಿತರಣೆಯನ್ನು ನಾಲ್ಕು ಭಾಗವಾಗಿ ವಿಂಗಡಣೆ ಮಾಡಲಾಗಿದ್ದು, 1 ನೇ ವಿಭಾಗದಲ್ಲಿ ವೈದ್ಯಕೀಯ ಸಿಬ್ಬಂದಿಗಳಿಗೆ, 2ನೇ ವಿಭಾಗದಲ್ಲಿ ಪೌರ ಕಾರ್ಮಿಕರು, ಪೊಲೀಸರು, ಯೋಧರಿಗೆ ಲಸಿಕೆ ನೀಡಲಾಗುತ್ತದೆ. 3 ನೆಯ ವಿಭಾಗದಲ್ಲಿ 50 ವರ್ಷ ಮೇಲ್ಪಟ್ಟವರು ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಈ ಲಸಿಕೆ ವಿತರಣೆಯ ಪ್ರಕ್ರಿಯೆ, ತಂತ್ರಜ್ಞಾನ, ಸಂಪರ್ಕ ಜಾಲಕ್ಕಾಗಿ ಡಿಜಿಟಲ್ ವೇದಿಕೆ ಬಳಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.