ಧರ್ಮಸ್ಥಳ: ಎಸ್ಕೆಡಿಆರ್ಡಿಪಿ ಯೋಜನೆಯ ಮೂಲಕ 21 ಕೋಟಿ ರೂ. ಗಳಲ್ಲಿ 20 ಸಾವಿರ ಟ್ಯಾಬ್ಗಳು ಮತ್ತು 10 ಸಾವಿರ ಲ್ಯಾಪ್ಟಾಪ್ಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ನಡೆದ ತಮ್ಮ 53 ನೇ ವರ್ಧ್ಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಯಂತ್ರಶ್ರೀ ಯೋಜನೆಯಡಿಯಲ್ಲಿ ಸುಮಾರು 15 ಕೋಟಿ ರೂ. ಗಳ ಕೃಷಿ ಯಂತ್ರೋಪಕರಣಗಳು ಮತ್ತು 8 ಸಾವಿರ ಎಕರೆ ಕೃಷಿ ಭೂಮಿ ಖರೀದಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಾತ್ಸಲ್ಯ ಯೋಜನೆಯಡಿ 10,400ಕ್ಕೂ ಅಧಿಕ ನಿರ್ಗತಿಕರ ಕಲ್ಯಾಣಕ್ಕಾಗಿ 2 ಕೋಟಿ ರೂ. ಗಳನ್ನು ಬಳಸಿಕೊಳ್ಳಲಾಗಿದೆ. ಅವರಿಗೆ ಅಗತ್ಯ ವ್ಯವಸ್ಥೆಗಳನ್ನು ಒದಗಿಸಿ ಕೊಡಲಾಗಿದೆ ಎಂದು ಹೆಗ್ಗಡೆ ಮಾಹಿತಿ ನೀಡಿದ್ದಾರೆ. ರಾಜ್ಯದ 150 ನದಿಗಳ ಪುನಶ್ಚೇತನಕ್ಕಾಗಿ 10 ಕೋಟಿ ರೂ. ಬಳಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ನೆಲಮಂಗಲದಲ್ಲಿ ನ್ಯೂರೋಪತಿ ಆಸ್ಪತ್ರೆ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದೆ. ಈ ಆಸ್ಪತ್ರೆ ಶೀಘ್ರದಲ್ಲೇ ಉದ್ಘಾಟನೆಯಾಗಲಿದ್ದು, ಸೇವೆಗೆ ಲಭ್ಯವಾಗಲಿದೆ. ಅಲ್ಲದೆ ಧರ್ಮಸ್ಥಳದ ಅನ್ನಪೂರ್ಣ ಡೈನಿಂಗ್ ಹಾಲ್, ಆನ್ಲೈನ್ ಬುಕ್ಕಿಂಗ್ ಸೇವೆ ಮತ್ತು ವಾಣಿಜ್ಯ ವ್ಯವಹಾರಗಳ ವಿಸ್ತರಣೆ ಕಾರ್ಯವೂ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಜೊತೆಗೆ ಧರ್ಮಸ್ಥಳ ಟ್ರಸ್ಟ್ನ ಮೂಲಕ ರಾಜ್ಯದ 250 ಹಳೆಯ ದೇವಾಲಯಗಳು ನವೀಕರಣಗೊಂಡಿದೆ. ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ 1,135 ದೇವಾಲಯಗಳ ನಿರ್ಮಾಣ ಕಾರ್ಯಕ್ಕಾಗಿ 14 ಕೋಟಿ ರೂ. ನೀಡಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಒಂದು ತಿಂಗಳಲ್ಲಿ 30 ಕಲಾವಿದರನ್ನು ಒಳಗೊಂಡ ಯಕ್ಷಗಾನ ಆಯೋಜನೆ ಮಾಡಲಾಗಿದೆ. ಲಕ್ಷದೀಪೋತ್ಸವದ ಬಳಿಕ ಧರ್ಮಸ್ಥಳ ಮೇಳ ಸೇವಾ ಬಯಲಾಟಗಳನ್ನು ಆರಂಭ ಮಾಡಲಾಗುತ್ತದೆ ಎಂದು ಹೆಗ್ಗಡೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.