ತಿರುವನಂತಪುರಂ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ರಾಬಿನ್ ಕೆ ಹಮೀದ್ನನ್ನು ಯುಎಇಯಿಂದ ಭಾರತಕ್ಕೆ ಕರೆ ತರುವಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಯಶಸ್ವಿಯಾಗಿದೆ.
ಹಮೀದ್ ಭಾರತ ಮತ್ತು ಯುಎಇಯಲ್ಲಿದ್ದಾಗ, ಬಂಧಿತ ಇತರ ಆರೋಪಿಗಳಾದ ರಮೀಸ್ ಕೆಟಿ, ಜಲಾಲ್ ಎಎಮ್ ಮತ್ತು ಇತರರೊಂದಿಗೆ ಚಿನ್ನ ಕಳ್ಳಸಾಗಾಣೆ ಮಾಡುವ ಸಂಚು ಹೂಡಿದ್ದಾನೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ. ಆರೋಪಿಗಳು ಹಣ ವ್ಯವಸ್ಥೆ ಮಾಡಿ ದುಬೈನಲ್ಲಿ ಚಿನ್ನ ಖರೀದಿಸುತ್ತಾರೆ ಮತ್ತು ರಾಜತಾಂತ್ರಿಕ ಬ್ಯಾಗೇಜುಗಳ ಮೂಲಕ ಭಾರತಕ್ಕೆ ಅದನ್ನು ಕಳ್ಳಸಾಗಣೆ ಮಾಡುತ್ತಾರೆ ಎಂದು ತನಿಖಾ ಸಂಸ್ಥೆ ಬಹಿರಂಗಪಡಿಸಿದೆ.
ಎನ್ಐಎ ತನಿಖೆಯ ಪ್ರಕಾರ, ಯುಎಇಯಲ್ಲಿ ಎಲೆಕ್ಟ್ರಾನಿಕ್ಸ್ ಅಥವಾ ವಿದ್ಯುತ್ ಉಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳಲ್ಲಿ ಚಿನ್ನವನ್ನು ಅಡಗಿಸಿ ಕೇರಳದ ರಾಜಧಾನಿ ತಿರುವನಂತಪುರಂಗೆ ಅದನ್ನು ಕಳ್ಳಸಾಗಾಣೆ ಮಾಡಲು ಹಮೀದ್ ವ್ಯವಸ್ಥೆ ಮಾಡಿದ್ದ ಎಂದು ಹೇಳಲಾಗಿದೆ.
ಜುಲೈ 5 ರಂದು ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ಬ್ಯಾಗೇಜುಗಳಿಂದ 14.82 ಕೋಟಿ ರೂ.ಗಳ 30 ಕಿಲೋಗ್ರಾಂಗಳಷ್ಟು ಚಿನ್ನವನ್ನು ವಶಪಡಿಸಿಕೊಂಡಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು .
42 ವರ್ಷದ ಹಮೀದ್ ಸೋಮವಾರ ದುಬೈನಿಂದ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಆತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಇದೀಗ ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಮತ್ತು ಎನ್ಐಎ ಆತನ ವಶಕ್ಕೆ ಪಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
— NIA India (@NIA_India) October 26, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.