ನವದೆಹಲಿ: ಭ್ರಷ್ಟಾಚಾರದ ವಿರುದ್ಧ ದೇಶವು ಕಳೆದ ಹಲವು ಕೆಲವು ವರ್ಷಗಳಿಂದ ಶೂನ್ಯ ಸಹಿಷ್ಣುತೆಯನ್ನುತೋರಿಸುತ್ತಿದೆ. 2014 ರಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಡಳಿತ, ಬ್ಯಾಂಕಿಂಗ್ ವ್ಯವಸ್ಥೆ, ಆರೋಗ್ಯ, ಶಿಕ್ಷಣ, ಕೃಷಿ, ಕಾರ್ಮಿಕ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಸುಧಾರಣೆಗಳು ಕಂಡುಬಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಾಗೃತಿ ಅರಿವು ಸಪ್ತಾಹದ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು.
ಭ್ರಷ್ಟಾಚಾರ ಕೇವಲ ಕೆಲವು ರೂಪಾಯಿಗಳ ವಿಷಯವಲ್ಲ. ಒಂದು ಕಡೆ ಭ್ರಷ್ಟಾಚಾರವು ದೇಶದ ಅಭಿವೃದ್ಧಿಗೆ ಮಾರಕವಾಗಿದೆ . ಮತ್ತೊಂದೆಡೆ, ಭ್ರಷ್ಟಾಚಾರವು ಸಾಮಾಜಿಕ ಸಮತೋಲನವನ್ನು ನಾಶಪಡಿಸುತ್ತದೆ. ಭ್ರಷ್ಟಾಚಾರವು ದೇಶದ ವ್ಯವಸ್ಥೆಯ ಮೇಲಿನ ಜನರ ನಂಬಿಕೆಗೆ ಹೊಡೆತ ನೀಡುತ್ತದೆ. ಭ್ರಷ್ಟಾಚಾರದ ಒಂದು ಪ್ರಕರಣದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಿದರೂ ಅದು ಭವಿಷ್ಯದ ಭ್ರಷ್ಟಾಚಾರಕ್ಕೆ ಅಡಿಪಾಯವನ್ನು ಹಾಕಿ ಬಿಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಭ್ರಷ್ಟಾಚಾರದಿಂದ ಹೆಚ್ಚು ನಷ್ಟವನ್ನು ಅನುಭವಿಸಿದವರು ನಮ್ಮ ದೇಶದ ಬಡವರು. ಪ್ರಾಮಾಣಿಕ ವ್ಯಕ್ತಿ ತೊಂದರೆಗೊಳಗಾಗುತ್ತಾನೆ. ಆದರೆ ಇಂದು ಡಿಬಿಟಿಗಳ ಮೂಲಕ ಬಡವರ ಹಣ ಬಡವರಿಗೆ ಶೇ. 100ರಷ್ಟು ಸಿಗುವುದನ್ನು ಖಚಿತಪಡಿಸಲಾಗುತ್ತಿದೆ ಎಂದಿದ್ದಾರೆ.
ಭಾರತೀಯರು ಭ್ರಷ್ಟಾಚಾರದ ವಿರುದ್ಧ ಹೋರಾಡಿ ಭಾರತವನ್ನು ಬಲಿಷ್ಠಗೊಳಿಸುವ ಕಾರ್ಯವನ್ನು ಸದಾ ಮುಂದುವರೆಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಜಾಗೃತಿ ಅರಿವು ಸಪ್ತಾಹ ಇಂದಿನಿಂದ ನವೆಂಬರ್ 2ರವರೆಗೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.