ಬೆಂಗಳೂರು: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರು ವಾರ್ತಾ ಶಾಖೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಕುರಿತು ವೆಬಿನಾರ್ ಕಾರ್ಯಕ್ರಮ ಆಯೋಜಿಸಿದೆ.
ಅಕ್ಟೋಬರ್ 29ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 12.30 ರವರೆಗೆ ಈ ಕಾರ್ಯಕ್ರಮ ನಡೆಯಲಿದೆ.
ವೆಬಿನಾರ್ ನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶ್ರೀ ಬಸವರಾಜ ಪಾಟೀಲ್ ಸೇಡಂ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ಹಾಗು ಹಿರಿಯ ಪತ್ರಕರ್ತ, ಮಿಥಿಕ್ ಸೊಸೈಟಿಯ ವ್ಯವಸ್ಥಾಪಕ ಸದಸ್ಯ ಶ್ರೀ ದು ಗು ಲಕ್ಷ್ಮಣ ಅವರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.
ಆಸಕ್ತರು ಈ ವೆಬಿನಾರ್ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದ್ದು, ಭಾಗವಹಿಸಲು http://meet.google.com/qzv_rjmn_mjp , ಟ್ವಿಟರ್: @PIBBengaluru, ಫೇಸ್ಬುಕ್ PIB Bengaluru ಲಿಂಕ್ ಗಳನ್ನು ಬಳಕೆ ಮಾಡುವಂತೆಯೂ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.