ನವದೆಹಲಿ: ಹರಿಯಾಣದ ಬಲ್ಲಬ್ಗಢದಲ್ಲಿ ನಡೆದ ಲವ್ ಜಿಹಾದ್ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ನ ಅಂತರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಸುರೇಂದ್ರ ಜೈನ್ ಖಂಡಿಸಿದ್ದಾರೆ. ಅಲ್ಲದೆ ಲವ್ ಜಿಹಾದ್ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ತರಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕಳೆದ ಏಳು ದಿನಗಳಲ್ಲಿ ಮೇವತ್ ಮತ್ತು ಗುರುಗ್ರಾಮಗಳಲ್ಲಿ ಹಲವು ಯುವತಿಯರನ್ನು ಅಪಹರಣ ಮಾಡಲಾಗಿದೆ. ಹೀಗಾಗಿ ಕೇಂದ್ರ ಸರಕಾರ ಬಲವಂತದ ಮತಾಂತರ ಮತ್ತು ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಜೈನ್ ಆಗ್ರಹಿಸಿದ್ದಾರೆ.
“ಕೇಂದ್ರ ಸರಕಾರ ಕಾನೂನು ತರಬೇಕು. ನಾಗರಿಕ ಸಮಾಜದಲ್ಲಿ ಮತಾಂತರ ಮತ್ತು ಲವ್ ಜಿಹಾದ್ ನಡೆಯಲು ಬಿಡಬಾರದು. ಇದು ಕೇವಲ ಜನಸಂಖ್ಯೆಯ ಮೇಲಿನ ಅತಿಕ್ರಮಣವಲ್ಲ, ಹಿಂದುಯೇತರರ ಆತ್ಮಾಭಿಮಾನದ ಮೇಲಿನ ದಾಳಿ ಮತ್ತು ದೇಶದ ಭದ್ರತೆಯ ಸವಾಲು” ಎಂದಿದ್ದಾರೆ.
ಬಲ್ಲಬ್ಗಢದಲ್ಲಿ 21 ವರ್ಷದ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕನೋರ್ವ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಆಕೆ ಇತರನ್ನು ಮದುವೆಯಾಗಲು ಇಸ್ಲಾಂ ಧರ್ಮಕ್ಕೆ ನಿರಾಕರಿಸಿದ್ದು ಆತನ ಆಕ್ರೋಶಕ್ಕೆ ಕಾರಣವಾಗಿತ್ತು ಎಂದು ಹೇಳಲಾಗಿದೆ.
ಈ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿ. ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿದರೆ ಮಾತ್ರ ಸಾಲದು. ಅಫಿಡವಿಟ್ ಬಗ್ಗೆ ಸುಳ್ಳು ಹೇಳುವ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.