ನವದೆಹಲಿ: ಪೂರ್ವ ಲಡಾಕ್ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪ್ರಸ್ತುತ ಭದ್ರತಾ ಸನ್ನಿವೇಶವನ್ನು ನಿರ್ವಹಿಸುತ್ತಿರುವ ಬಗ್ಗೆ ಭಾರತೀಯ ಸೇನೆಯನ್ನು ಶ್ಲಾಘಿಸಿದ್ದಾರೆ.
ಸೇನಾ ಕಮಾಂಡರ್ಗಳ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ನಮ್ಮ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸಲು ಸರ್ಕಾರವು ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಹೇಳಿದರು.
ಟ್ವಿಟ್ ಮಾಡಿದ ಅವರು, ಸ್ವಾತಂತ್ರ್ಯದ ನಂತರ ಈ ದೇಶದ ಭದ್ರತೆ ಮತ್ತು ಸಾರ್ವಭೌಮತೆಗೆ ಎದುರಾದ ಹಲವಾರು ಸವಾಲುಗಳನ್ನು ಎದುರಿಸುವಲ್ಲಿ ಸೈನ್ಯವು ಯಶಸ್ವಿಯಾಗಿದೆ ಎಂದು ಹೇಳಿದರು. ಭಯೋತ್ಪಾದನೆ, ದಂಗೆ ಅಥವಾ ಯಾವುದೇ ಬಾಹ್ಯ ದಾಳಿ ಇರಲಿ, ಆ ಬೆದರಿಕೆಗಳನ್ನು ತಟಸ್ಥಗೊಳಿಸುವಲ್ಲಿ ಸೇನೆಯು ಮಹತ್ವದ ಪಾತ್ರ ವಹಿಸಿದೆ ಎಂದರು.
“ಪ್ರಸ್ತುತ ಭದ್ರತಾ ಸನ್ನಿವೇಶದಲ್ಲಿ ಭಾರತೀಯ ಸೇನೆಯು ಕೈಗೊಂಡಿರುವ ಉಪಕ್ರಮಗಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಅವರು ಹೇಳಿದ್ದಾರೆ
ಸೋಮವಾರ ಪ್ರಾರಂಭವಾದ ನಾಲ್ಕು ದಿನಗಳ ಸಮ್ಮೇಳನದಲ್ಲಿ ಚೀನಾದೊಂದಿಗೆ ಭಾರತದ ಯುದ್ಧ ಸಿದ್ಧತೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಸೇನೆಯ ಉನ್ನತ ಕಮಾಂಡರ್ಗಳು ಸಮಗ್ರ ಪರಿಶೀಲನೆ ನಡೆಸುತ್ತಿದ್ದಾರೆ.
Addressed the Army Commanders’ Conference in New Delhi today. I’m extremely proud of the initiatives undertaken by the Indian Army in the current security environment.
— Rajnath Singh (@rajnathsingh) October 28, 2020
The Indian Army has been successful in addressing several challenges to the security and sovereignty of this country since the Independence.
Be it the problem of terrorism, insurgency or any external attack, the Army has played a significant role in neutralising those threats.
— Rajnath Singh (@rajnathsingh) October 28, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.