ನವದೆಹಲಿ: ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ಭಾರತ ಕ್ಷಿಪ್ರಗತಿಯಲ್ಲಿ ಕ್ರಮಕೈಗೊಂಡಿದೆ. ಕೊರೊನಾ ವೈರಸ್ ಕಾಣಿಸಿಕೊಂಡ ತಕ್ಷಣ ಲಾಕ್ಡೌನ್ ವಿಧಿಸಿರುವುದರಿಂದ ಹಲವು ಜೀವಗಳು ಉಳಿದುಕೊಂಡಿದೆ. ಆರ್ಥಿಕತೆ ಈಗ ಚೇತರಿಕೆಯ ಹಾದಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದಿ ಎಕನಾಮಿಕ್ ಟೈಮ್ಸ್ಗೆ ಸಂದರ್ಶನ ನೀಡಿದ ಅವರು, ಭಾರತ ಈಗಲೂ 2024ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಹೊಂದುವ ಬಗ್ಗೆ ಆಶಾವಾದವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಸುಧಾರಣೆಯನ್ನು ತರಲಾಗಿದೆ, ಕಾರ್ಮಿಕ ಸುಧಾರಣೆಯನ್ನು ಕೂಡ ತರಲಾಗಿದೆ. ಆದರೆ ವಿರೋಧಿಗಳು ಯಾವುದೇ ಕಾರಣವಿಲ್ಲದೆ ಇದನ್ನು ವಿರೋಧಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಶ್ರೇಯಸ್ಸನ್ನು ನೀಡಲು ಬಯಸುತ್ತಿಲ್ಲ. ಹೀಗಾಗಿ ಸುಧಾರಣೆಗಳನ್ನು ವಿರೋಧಿಸುತ್ತಿದ್ದಾರೆ ಎಂದಿದ್ದಾರೆ.
“ಭಾರತದಲ್ಲಿ ಕಾರ್ಮಿಕರಿಗಿಂತ ಹೆಚ್ಚಾಗಿ ಕಾನೂನುಗಳಿವೆ ಎಂದು ಹಾಸ್ಯ ಮಾಡಲಾಗುತ್ತಿತ್ತು. ಕೆಲವೊಮ್ಮೆ ಕಾರ್ಮಿಕ ಕಾನೂನುಗಳು ಕಾರ್ಮಿಕರಿಗಿಂತ ಹೆಚ್ಚಾಗಿ ಬೇರೆಯವರಿಗೆ ಸಹಾಯ ಮಾಡುತ್ತದೆ. ಹೀಗಾಗಿ ನಮ್ಮ ಸರಕಾರವು ಕಾರ್ಮಿಕ ಸುಧಾರಣೆಗಳನ್ನು ಮಾಡಿದೆ. ಇದರಿಂದ ಭಾರತವು ಜಾಗತಿಕ ಉತ್ಪಾದನೆ ಕೇಂದ್ರವಾಗಲಿದೆ. ಜಾಗತಿಕ ಪೂರೈಕೆ ಸರಪಳಿ ಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ” ಎಂದಿದ್ದಾರೆ.
ಇನ್ನೊಂದು ದೇಶದ ಪರಿಹಾರವಾಗುವುದು ನಮ್ಮ ಪ್ರಯತ್ನವಲ್ಲ, ಆದರೆ ವಿಭಿನ್ನ ಅವಕಾಶಗಳನ್ನು ನೀಡುವ ದೇಶವಾಗುವುದು ನಮ್ಮ ಪ್ರಯತ್ನ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.