ಅಹ್ಮದಾಬಾದ್: ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಗುಜರಾತಿನ ಮಾಜಿ ಮುಖ್ಯಮಂತ್ರಿ ಕೇಶೂಭಾಯ್ ಪಟೇಲ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನವನ್ನು ಸಲ್ಲಿಕೆ ಮಾಡಿದ್ದಾರೆ.
ಇಂದು ಮತ್ತು ನಾಳೆ ಗುಜರಾತಿನಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ. ತಮ್ಮ ತಾಯಿ ಹೀರಾ ಮತ್ತು ಸಹೋದರನನ್ನು ಅವರು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೇ, ಕೇವಾಡಿಯಾ ಮತ್ತು ಅಹ್ಮದಾಬಾದ್ ನಡುವೆ ʼಸೀಪ್ಲೇನ್ʼ ಸೇವೆಯನ್ನು ಉದ್ಘಾಟಿಸಲಿದ್ದಾರೆ. ಏಕತಾ ಪ್ರತಿಮೆಯ ಆವರಣದಲ್ಲಿ ಹಲವಾರು ಪ್ರವಾಸೋದ್ಯಮ ಯೋಜನೆಗಳಿಗೆ ಚಾಲನೆಯನ್ನು ನೀಡಿದ್ದಾರೆ.
ಅಕ್ಟೋಬರ್ 31 ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿಯಾಗಿದ್ದು, ದೇಶದಾದ್ಯಂತ ಅದನ್ನು ʼಏಕತಾ ದಿವಸ್ʼ ಆಗಿ ಆಚರಿಸಲಾಗುತ್ತಿದೆ.
ಇತ್ತೀಚಿಗೆ ನಿಧನರಾದ ಗುಜರಾತಿ ಸೂಪರ್ ಸ್ಟಾರ್ ನರೇಶ ಕನೋಡಿಯಾ ಅವರ ಕುಟುಂಬ ಸದಸ್ಯರನ್ನೂ ಮೋದಿ ಭೇಟಿಯಾಗಲಿದ್ದಾರೆ ಎಂದು ಹೇಳಲಾಗಿದೆ.
#WATCH: Prime Minister Narendra Modi arrives at Ahmedabad. He is on a 2-day visit to Gujarat. pic.twitter.com/oYOlDie8w5
— ANI (@ANI) October 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.