ಬೆಂಗಳೂರು: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ 2020 ಕರಡನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ಕರಡಿನಲ್ಲಿ ರಾಜ್ಯದ ಸರ್ಕಾರಿ ಸೇವೆಗಳಲ್ಲಿ ಕಾರ್ಯ ನಿರ್ವಹಿಸುವ ಜನರು ಟಿವಿ, ಸಿನೆಮಾ, ಸಂಸ್ಕೃತಿ ಹಾಗೂ ವೈಜ್ಞಾನಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಕ್ಕೆ ನಿಷೇಧ ಹೇರುವ ಸಂಬಂಧ ಪ್ರಸ್ತಾಪ ಮಾಡಲಾಗಿದೆ. ಇದರಲ್ಲಿ ಸರ್ಕಾರಿ ನೌಕರಿ ಹೊಂದಿರುವವರು ಏನು ಮಾಡಬಹುದು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ಸರ್ಕಾರ ವಿವರಿಸಿದೆ ಎಂದು ಮೂಲಗಳು ತಿಳಿಸಿವೆ.
ಸಂದರ್ಭಕ್ಕೆ ಅನುಗುಣವಾಗಿ ಪ್ರಬಂಧ, ನಾಟಕ, ಸಣ್ಣಕಥೆ, ಕವನ, ಕಾದಂಬರಿಗಳನ್ನು ಪೂರ್ವ ಅನುಮತಿ ಇರದೆಯೇ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಸರ್ಕಾರದ ಅನುಮತಿ ಪಡೆಯದೆಯೇ ಪತ್ರಿಕೆ/ನಿಯತಕಾಲಿಕೆಯ ಪ್ರಕಟಣೆ, ನಿರ್ವಹಣೆ, ಸಂಪಾದನೆ, ರೇಡಿಯೋ, ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ಜೊತೆಗೆ ಸರ್ಕಾರಿ ನೌಕರರ ಕುಟುಂಬಸ್ಥರು ಸಹ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ನಿಷೇಧವನ್ನು ಈ ಕರಡು ಪ್ರತಿಯಲ್ಲಿ ಹೇರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.