ಶ್ರೀನಗರ: ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿವೆ. ಭಯೋತ್ಪಾದನಾ ಚಟುವಟಿಕೆಗಳನ್ನು ರಾಜಾರೋಷವಾಗಿ ಮಾಡಲು ಉಗ್ರಗಾಮಿಗಳಿಗೆ ಕಷ್ಟವಾಗುತ್ತಿದೆ. ಹೀಗಾಗಿ ಪ್ರಸ್ತುತ ಉಗ್ರರು ಬಿಜೆಪಿ ಕಾರ್ಯಕರ್ತರನ್ನು ಅಲ್ಲಿ ಗುರಿಯಾಗಿಸಿಕೊಂಡಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಅಲ್ಲಿ 9 ಬಿಜೆಪಿ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.
ಇನ್ನು ಮುಂದಿನ ದಿನಗಳಲ್ಲಿ ಅಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಮತ್ತು ಪಂಚಾಯತಿ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹೀಗಾಗಿ ಈ ಸಂದರ್ಭದಲ್ಲಿ ಉಗ್ರರು ಇನ್ನಷ್ಟು ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ.
ಭದ್ರತೆಯ ದೃಷ್ಟಿಯಿಂದ ಈಗಾಗಲೇ ನೂರಾರು ಬಿಜೆಪಿ ಕಾರ್ಯಕರ್ತರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವರಿಗೆ ಸಮರ್ಪಕವಾಗಿ ಭದ್ರತೆಯನ್ನು ಒದಗಿಸಲಾಗಿದೆ. ಆದರೂ ಕೈಗೆ ಸಿಗುವ ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಗುರಿಯಾಗಿಸುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
ಕಳೆದ ಜುಲೈನಿಂದ ಅಕ್ಟೋಬರ್ ವರೆಗೆ ಉಗ್ರರು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರ ಭದ್ರತೆಯ ದೃಷ್ಟಿಯಿಂದ ಹೊಸ ಕಾರ್ಯತಂತ್ರವನ್ನು ರೂಪಿಸಬೇಕಾದ ಅಗತ್ಯವಿದೆ ಎಂದು ಈ ಹಿಂದೆ ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.