ನವದೆಹಲಿ: ರಾಜ್ಯದ ಆರು ಮಂದಿ ಪೊಲೀಸ್ ಸಿಬ್ಬಂದಿಗಳು ಕೇಂದ್ರ ಗೃಹ ಸಚಿವರ ವಿಶೇಷ ಕಾರ್ಯಾಚರಣೆ ಪದಕಕ್ಕೆ ಭಾಜನರಾಗಿದ್ದಾರೆ.
ರಾಜ್ಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ, ಡಿವೈಎಸ್ಪಿಗಳಾದ ಡಿ ಕುಮಾರ್, ಎಸ್ ಕೆ ಉಮೇಶ್, ಇನ್ಸ್ಪೆಕ್ಟರ್ ಸುಶೀಲಾ, ಕಾನ್ಸ್ಟೇಬಲ್ಗಳಾದ ವೈ ಶಂಕರ್ ಮತ್ತು ಎನ್ ಪ್ರಕಾಶ್ ಅವರು 2019-20 ನೇ ಸಾಲಿನ ಗೃಹಸಚಿವರ ವಿಶೇಷ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪಟ್ಟಿಯಲ್ಲಿ ಕರ್ನಾಟಕ ಸೇರಿದಂತೆ ದೆಹಲಿ, ಗುಜರಾತ್, ತಮಿಳುನಾಡು, ಕೇರಳ ಪೊಲೀಸರೂ ಸಹ ಈ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. 2019 ರ ಡಿಸೆಂಬರ್ 21 ರಿಂದ 2020 ರ ಜನವರಿ 20 ರ ವರೆಗೆ ನಡೆದಿದ್ದ ವಿಶೇಷ ಕಾರ್ಯಾಚರಣೆಯಲ್ಲಿ ಈ ಸಿಬ್ಬಂದಿಗಳು ಸೇವೆ ಸಲ್ಲಿಸಿದ್ದಾಗಿ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ಡಿ.ಕೆ ಘೋಷ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Ministry of Home Affairs announces names of officers to be conferred with the ‘Union Home Minister’s Special Operation Medal’ for the year 2020 pic.twitter.com/JlinSp3vhm
— ANI (@ANI) October 31, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.