ಬೆಂಗಳೂರು: ನಾಡಿನ ಭಾಷೆ ಕನ್ನಡವನ್ನು ಸಶಕ್ತಗೊಳಿಸಲು 2021ರ ಅಕ್ಟೋಬರ್ 31 ರ ವರೆಗಿನ ಸಮಯವನ್ನು ‘ಕನ್ನಡ ಕಾಯಕ ವರ್ಷ’ವನ್ನಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನುಡಿದಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.
ಜಗತ್ತು ತಂತ್ರಜ್ಞಾನದ ಹಿಂದೆ ಬಿದ್ದಿದೆ. ಈ ಯುಗದಲ್ಲಿ ಕನ್ನಡ ಉಳಿಸಿ, ಬೆಳೆಸಲು ಪೂರಕ ಎಂಬಂತೆ ಮುಂದಿನ ಒಂದು ವರ್ಷಗಳ ಕಾಲ ಕನ್ನಡ ಕಟ್ಟುವ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ. ಈ ಸಂಬಂಧ ಪೂರಕ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದಾಗಿಯೂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಕೇವಲ ನವೆಂಬರ್ ತಿಂಗಳಿಗಷ್ಟೇ ಕನ್ನಡ ಸೀಮಿತ ಎಂಬಂತೆ ಆಗಬಾರದು. ಬದಲಾಗಿ ವರ್ಷಪೂರ್ತಿ ಕನ್ನಡ ಕಟ್ಟುವ ನೆಲೆಯಲ್ಲಿ ನಮ್ಮ ಚಿಂತನೆಗಳಿರಬೇಕು. ಈ ಹಿನ್ನೆಲೆಯಲ್ಲಿ ಇದಕ್ಕೆ ಪೂರಕವೆನಿಸುವ ಯೋಜನಾ ಸ್ವರೂಪಗಳನ್ನು ಪ್ರಕಟ ಮಾಡುವುದಾಗಿಯೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯೂ ಅನುಕೂಲಕಾರಿಯಾಗಲಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಜೊತೆಗೆ ಈ ನಾಡು, ನುಡಿ ಕಟ್ಟುವ ಕೈಂಕರ್ಯ ಎಲ್ಲರ ಜವಾಬ್ದಾರಿ. ಕಾಲಕ್ಕೆ ತಕ್ಕಂತೆ ಭಾಷೆಯ ಬೆಳವಣಿಗೆಯತ್ತಲೂ ನಮ್ಮ ಚಿಂತನೆಗಳಿರಬೇಕು. ತಾಂತ್ರಿಕ ಯುಗದಲ್ಲಿ ತಂತ್ರಜ್ಞಾನಕ್ಕೆ ತಕ್ಕಂತೆ ಕನ್ನಡ ಕಟ್ಟುವತ್ತ ನಾವೆಲ್ಲ ದೃಷ್ಟಿ ಹಾಯಿಸಬೇಕು. ರಾಜ್ಯದ ಸಮಗ್ರ ಅಭಿವೃದ್ಧಿ ನಮ್ಮೆಲ್ಲರ ಆದ್ಯತೆಯಾಗಲಿ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.