ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ, ಎನ್ಎಸ್ಎಸ್ ಪ್ರಶಸ್ತಿಗಳನ್ನು ಪ್ರದಾನಿಸಿ ಮಾತನಾಡಿದರು.
ಕ್ರೀಡಾಪಟುಗಳು ದೇಶವನ್ನು ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಮಹೋನ್ನತ ಸಾಧನೆ ಮಾಡುವತ್ತ ಚಿತ್ತ ಹರಿಸಬೇಕು. ಪ್ರಧಾನಿ ಮೋದಿ ಅವರ ಕೇಂದ್ರ ಸರ್ಕಾರ ಖೇಲೋ ಇಂಡಿಯಾ, ಫಿಟ್ ಇಂಡಿಯಾ ಮೊದಲಾದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಇವೆಲ್ಲವೂ ಕ್ರೀಡಾಳುಗಳ ಹಿತಕ್ಕಾಗಿ. ಆದ್ದರಿಂದ ಕ್ರೀಡಾಪಟುಗಳು ದೇಶದ ಕೀರ್ತಿಯನ್ನು ತಮ್ಮ ಕ್ಷೇತ್ರದಲ್ಲಿ ಹೆಚ್ಚು ಎತ್ತರಕ್ಕೆ ಏರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಮುಂದಿನ ಒಲಿಂಪಿಕ್ಸ್ನಲ್ಲಿ ರಾಜ್ಯದ ಕ್ರೀಡಾಪಟುಗಳ ಸಾಧನೆ ಹೆಚ್ಚಾಗಬೇಕು. ಇದಕ್ಕೆ ರಾಜ್ಯ ಸರ್ಕಾರ ಸಹ ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, ಕಳೆದ ಮೂರು ವರ್ಷಗಳ ಕಾಲ ಕ್ರೀಡಾ ಪ್ರಶಸ್ತಿ ನೀಡಲಾಗಿರಲಿಲ್ಲ. ಈ ಬಾರಿ ಕೊರೋನಾ ಸಂಕಷ್ಟ ಎದುರಾಗಿದೆ. ಆದರೂ ಈ ಬಾರಿ ಸರಳ ಸಮಾರಂಭದ ಮೂಲಕ ಕ್ರೀಡಾ ಪ್ರಶಸ್ತಿ ಪ್ರದಾನಿಸಲಾಗಿದೆ. ಅದರಂತೆ ಕೇಂದ್ರ ಜಾರಿಗೆ ತೀದಿರುವ ನೂತನ ಶಿಕ್ಷಣ ನೀತಿಯಲ್ಲಿಯೂ ಕ್ರೀಡೆಗೆ ವಿಶೇಷ ಸ್ಥಾನ ನೀಡಲಾಗಿದೆ. ಪಠ್ಯದ ಭಾಗವಾಗಿ ಕ್ರೀಡೆಯನ್ನು ಪರಿಗಣಿಸಲಾಗಿದೆ. ಇದು ಸರ್ಕಾರ ಕ್ರೀಡೆಗೆ ನೀಡುತ್ತಿರುವ ಉತ್ತೇಜನ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.