ನವದೆಹಲಿ: ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ) ಅನ್ನು ಸಂಪೂರ್ಣವಾಗಿ ಬದಲಾಯಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಸೋಮವಾರ ಹೇಳಿದ್ದಾರೆ.
ಮಹಿಳಾ ಸುರಕ್ಷತೆ ಕುರಿತ ಕಾನ್ಫರೆನ್ಸ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರವು ಮುಖ್ಯ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಪೊಲೀಸ್ ಅಧಿಕಾರಿಗಳು, ಎನ್ಜಿಒಗಳು ಮತ್ತು ರಾಜ್ಯ ಸರ್ಕಾರಗಳಿಗೆ ಐಪಿಸಿ ಮತ್ತು ಸಿಆರ್ಪಿಸಿ ಅನ್ನು ಬದಲಾಯಿಸುವ ನಿಟ್ಟಿನಲ್ಲಿ ಪತ್ರವನ್ನು ಬರೆದಿದೆ ಎಂದು ಹೇಳಿದ್ದಾರೆ.
“ನಾವೆಲ್ಲರೂ ಮುಂದೆ ಬಂದು ಯಾವುದೇ ಲಿಂಗ ಅನ್ಯಾಯವಾಗದಂತೆ ನೋಡಿಕೊಳ್ಳುವ ದಿಕ್ಕಿನಲ್ಲಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಅನೇಕ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಈಗ ನಾವು ಬ್ರಿಟಿಷ್ ಯುಗದ ಐಪಿಸಿ ಮತ್ತು ಸಿಆರ್ಪಿಸಿಯನ್ನು ಸಹ ಬದಲಾಯಿಸಲು ಮುಂದಾಗಿದ್ದೇವೆ. ಕಾಲಕಾಲಕ್ಕೆ ನಾವು ಈ ಎರಡು ವಿಭಾಗಗಳನ್ನು ತಿದ್ದುಪಡಿ ಮಾಡುತ್ತಾ ಬಂದಿದ್ದೇವೆ. ಆದರೆ ದೇಶದ ಪ್ರಸ್ತುತ ಸನ್ನಿವೇಶವನ್ನು ಗಮನಿಸಿ, ಐಪಿಸಿ ಮತ್ತು ಸಿಆರ್ಪಿಸಿಯನ್ನು ಸಂಪೂರ್ಣವಾಗಿ ಬದಲಾಯಿಸಲು ಸರ್ಕಾರ ನಿರ್ಧರಿಸಿದೆ ಮತ್ತು ಅದಕ್ಕಾಗಿ ನಾವು ಎನ್ಜಿಒಗಳು, ರಾಜ್ಯ ಸರ್ಕಾರಗಳು, ಮುಖ್ಯ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಇದಕ್ಕಾಗಿ ಒಂದು ಸಮಿತಿಯನ್ನೂ ರಚಿಸಲಾಗಿದೆ. ಐಪಿಸಿ ಮತ್ತು ಸಿಆರ್ಪಿಸಿಯಲ್ಲಿ ಯಾವ ಬದಲಾವಣೆಗಳನ್ನು ಮಾಡಬೇಕೆಂಬುದರ ಬಗ್ಗೆ ನಿಮ್ಮೆಲ್ಲರಿಗೂ ಸಲಹೆಗಳನ್ನು ನೀಡಬೇಕೆಂದು ನಾನು ಮನವಿ ಮಾಡುತ್ತೇನೆ ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.