ನವದೆಹಲಿ: ಜಗತ್ತಿನಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರುತ್ತಿದೆ. ವಿಯೆನ್ನಾದಲ್ಲಿ ಭಯೋತ್ಪಾದಕರ ದಾಳಿ ನಡೆದಿದ್ದು, ಮೂವರು ಹತರಾದರೆ, 15 ಮಂದಿ ಗಾಯಗೊಂಡಿದ್ದಾರೆ.
ಆಸ್ಟ್ರಿಯಾ ರಾಜಧಾನಿ ಆಗಿರುವ ವಿಯೆನ್ನಾದಲ್ಲಿ ಕೆಫೆಗಳು, ರೆಸ್ಟೋರೆಂಟ್ ಮೇಲೆ ಸೋಮವಾರ ರಾತ್ರಿ ಉಗ್ರರು ಸರಣಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ಉಗ್ರನನ್ನು ಪೊಲೀಸರು ಕೊಂದುಹಾಕಿದ್ದಾರೆ.
ಘಟನೆಯನ್ನು ಜಗತ್ತಿನ ನಾಯಕರುಗಳು ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
“ವಿಯೆನ್ನಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ಮನಸ್ಸಿಗೆ ತೀವ್ರ ಆಘಾತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಭಾರತವು ಆಸ್ಟ್ರಿಯಾದ ಬೆಂಬಲಕ್ಕೆ ನಿಲ್ಲುತ್ತದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
“ಈ ದುರಂತದ ಸಮಯದಲ್ಲಿ ಭಾರತ ಆಸ್ಟ್ರೀಯಾದೊಂದಿಗೆ ನಿಲ್ಲುತ್ತದೆ. ನಾವೆಲ್ಲ ಘಟನೆಯಲ್ಲಿ ಸಂತ್ರಸ್ಥರಾದವರ ಮತ್ತು ಅವರ ಕುಟುಂಬಗಳ ಜೊತೆ ನಿಲ್ಲುತ್ತೇವೆ” ಎಂದಿದ್ದಾರೆ.
Deeply shocked and saddened by the dastardly terror attacks in Vienna. India stands with Austria during this tragic time. My thoughts are with the victims and their families.
— Narendra Modi (@narendramodi) November 3, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.