ನವದೆಹಲಿ: ಕರೋನ ವೈರಸ್ ಸಂಕ್ರಾಮಿಕ ರೋಗದ ನಡುವೆಯೂ ದೇಶದಲ್ಲಿ ಚುನಾವಣೆಗಳೂ ನಡೆಯುತ್ತಿವೆ. ಇಂದು ಅನೇಕ ಕಡೆ ಉಪಚುನಾವಣೆಗಳು ನಡೆಯುತ್ತಿದೆ. ಬಿಹಾರದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಜನರು ಎಲ್ಲಾ ಸುರಕ್ಷತಾ ಕ್ರಮಗಳ ಬಗ್ಗೆ ಯಾವುದೇ ಹಿಂಜರಿಕೆಯಿಲ್ಲದೆ ಮತದಾನ ಮಾಡಲು ಮುಂದಾಗುತ್ತಿದ್ದಾರೆ.
ಜನರ ಮತಚಲಾಯಿಸುವ ಉತ್ಸಾಹವನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.
ಅರರಿಯ ಜಿಲ್ಲೆಯ ಫೋರ್ಬ್ಸ್ಗಂಜ್ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ನಿಮ್ಮ ಮತವು ದೇಶದ ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿದೆ. ಕೊರೋನಾದ ಸಂಕಷ್ಟದ ಸಮಯದಲ್ಲೂ ಬಿಹಾರದ ಜನರು ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಸಂದೇಶವನ್ನು ನೀಡಿದ್ದಾರೆ” ಎಂದಿದ್ದಾರೆ.
“ಕೊರೋನಾ ಸಮಯದಲ್ಲೂ ಬಿಹಾರದ ಜನರು ಮನೆಯಿಂದ ಹೊರಗೆ ಬಂದು ಹೆಚ್ಚಿನ ಪ್ರಮಾಣದಲ್ಲಿ ಮತದಾನದಲ್ಲಿ ಭಾಗಿಯಾಗಿದ್ದಾರೆ. ಪ್ರಜಾಪ್ರಭುತ್ವದ ಮಹಾಶಕ್ತಿ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಬಿಹಾರದ ಜನತೆಗೆ ಇರುವ ಸಮರ್ಪಣಾ ಮನೋಭಾವವನ್ನು ಇದು ಇಡೀ ವಿಶ್ವಕ್ಕೆ ಪ್ರತಿಬಿಂಬಿಸಿದೆ” ಎಂದಿದ್ದಾರೆ.
ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚುನಾವಣೆಯನ್ನು ನಡೆಸಿಕೊಡುತ್ತಿರುವ ಚುನಾವಣಾ ಆಯೋಗ, ಆಡಳಿತ ಸಿಬ್ಬಂದಿ ಮತ್ತು ಭದ್ರತಾ ಪಡೆ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.