ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿಕೆ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿ. ಟಿ. ರವಿ, ಕೆಲ ದಿನಗಳ ಹಿಂದಷ್ಟೇ ಮದುವೆಗಾಗಿ ಮತಾಂತರ ಊರ್ಜಿತವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿತ್ತು. ಕರ್ನಾಟಕದಲ್ಲಿಯೂ ವೈವಾಹಿಕ ಉದ್ದೇಶಕ್ಕಾಗಿ ಮತಾಂತರವಾಗುವುದನ್ನು ನಿಷೇಧ ಮಾಡುವ ಕಾನೂನು ಜಾರಿಗೊಳಿಸಲಾಗುವುದು. ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಹಾಳು ಮಾಡುವಾಗ ನಾವು ಮೌನವಾಗಿರುವುದಿಲ್ಲ. ಮತಾಂತರದಲ್ಲಿ ಭಾಗಿಯಾಗುವವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ವಿಧಿಸಬೇಕಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಅಲಹಾಬಾದ್ ಹೈಕೋರ್ಟ್ ಮದುವೆಯ ಕಾರಣಕ್ಕೆ ಮತಾಂತರ ಪ್ರಕ್ರಿಯೆ ನಡೆಸುವುದು ತಪ್ಪು ಎಂದು ತೀರ್ಪು ನೀಡಿತ್ತು. ಈ ಸಂಬಂಧ ಅರ್ಜಿ ಸಲ್ಲಿಸಿದ್ದ ಭಿನ್ನ ಕೋಮಿನ ಜೋಡಿಗಳ ಅರ್ಜಿಯನ್ನು ನಿರಾಕರಿಸಿತ್ತು. ಇದೀಗ ರಾಜ್ಯದಲ್ಲಿಯೂ ಇಂತಹ ಒಂದು ಕಾನೂನು ಜಾರಿಗೆ ಚಿಂತನೆ ನಡೆಯುತ್ತಿದೆ.
On lines of Allahabad High Court’s order, Karnataka will enact a law banning religious conversions for the sake of marriage.
We will not remain silent when Jihadis strip the dignity of Our Sisters.
Any one involved in the act of conversion shall face severe & swift punishment.
— C T Ravi 🇮🇳 ಸಿ ಟಿ ರವಿ (@CTRavi_BJP) November 3, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.