ಬೆಂಗಳೂರು: ಪ್ರಸಕ್ತ ವರ್ಷದ ಬಿಇ ಆರ್ಕಿಟೆಕ್ಚರ್ ಪ್ರವೇಶಾತಿಯ ರ್ಯಾಂಕ್ ಪಟ್ಟಿಗೆ ಸಂಬಂಧಿಸಿದಂತೆ ಗೊಂದಲ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು ಗೊಂದಲ ಪಡುವಂತಾಗಿದೆ. ಈ ಸಂಬಂಧ ಈ ಪಟ್ಟಿಯನ್ನು ತಡೆಹಿಡಿಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರು ಮಾಹಿತಿ ನೀಡಿದ್ದಾರೆ.
ಕೋರ್ಸ್ ಪ್ರವೇಶಾತಿಗೆ ಸಂಬಂಧಿಸಿದಂತೆ ಕೆಇಎ ಪ್ರಕಟಿಸಿದ ರ್ಯಾಂಕ್ ಪಟ್ಟಿಗೆ ಸಂಬಂಧಿಸಿದಂತೆ ಅನೇಕ ವಿದ್ಯಾರ್ಥಿಗಳು ಗೊಂದಲ ವ್ಯಕ್ತಪಡಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಪಟ್ಟಿಯನ್ನು ತಡೆ ಹಿಡಿಯಲಾಗಿದೆ. ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಪಟ್ಟಿಯಲ್ಲಿ ವಿದ್ಯಾರ್ಥಿಗಳ ರ್ಯಾಂಕ್ ಗಳಲ್ಲಿ ವ್ಯತ್ಯಾಸಗಳು ಕಂಡುಬಂದಿದೆ. ಈ ಸಂಬಂಧ ತಕ್ಷಣ ಪರಿಶೀಲನೆ ನಡೆಸುವಂತೆ ಕೋರಿ ಅನೇಕ ವಿದ್ಯಾರ್ಥಿಗಳು ಮನವಿಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ರ್ಯಾಂಕ್ ಪಟ್ಟಿಯನ್ನು ತಡೆ ಹಿಡಿಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಸಕ್ತ ಸಾಲಿನ ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಾತಿಗೆ KEA ಪ್ರಕಟಿಸಿದ ರ್ಯಾಂಕ್ ಪಟ್ಟಿ ಗೊಂದಲದ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಎಲ್ಲಾ ವಿದ್ಯಾರ್ಥಿಗಳ ಹಿತರಕ್ಷಣೆಯನ್ನು ಗಮನದಲ್ಲಿಟ್ಟು ಮುಂದಿನ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. pic.twitter.com/IQkYiLqrfv
— Dr. Ashwathnarayan C. N. (@drashwathcn) November 3, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.