ಶಿವಮೊಗ್ಗ: ಪ್ರಸ್ತುತ ವರ್ಷದಲ್ಲಿ ರಾಜ್ಯದ ಸುಮಾರು 23.57 ಲಕ್ಷ ಮನೆಗಳಿಗೆ ಜಲಜೀವನ ಮಿಷನ್ ಅಡಿಯಲ್ಲಿ ನಳ್ಳಿ ನೀರು ತಲುಪುವಂತೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಜಲ ಶಕ್ತಿ ಸಚಿವರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಜೊತೆ ಚರ್ಚಿಸಿದ ಅವರು, ಈ ವಿಚಾರವನ್ನು ತಿಳಿಸಿದ್ದಾರೆ.
ಈಗಾಗಲೇ 24.72 ಲಕ್ಷ ಮನೆಗಳಿಗೆ ಈ ಮಿಷನ್ ಅಡಿಯಲ್ಲಿ ನೀರಿನ ಸಂಪರ್ಕ ನೀಡಲಾಗಿದೆ ಎಂದು ಅವರೂ ಮಾಹಿತಿ ನೀಡಿದ್ದಾರೆ. ಮನೆ ಮನೆಗೆ ಗಂಗೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ 4,093 ಕೋಟಿ ರೂ ಮತ್ತು ರಾಜ್ಯ ಸರ್ಕಾರ 3,982 ಕೋಟಿ ರೂ. ನೀಡುತ್ತಿದೆ. ಈ ಹಣವನ್ನು ಬಳಸಿ ರಾಜ್ಯದ 39,963 ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗಿದೆ. ಮುಂದಿನ 100 ದಿನಗಳಲ್ಲಿ 1,595 ಶಾಲೆಗಳಿಗೆ ಈ ಯೋಜನೆ ವಿಸ್ತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅದರಂತೆ ಈಗಾಗಲೇ ರಾಜ್ಯದ 65,911 ಅಂಗನವಾಡಿಗಳ ಪೈಕಿ 41,799 ಅಂಗನವಾಡಿಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಉಳಿದ ಅಂಗನವಾಡಿ ಕೇಂದ್ರಗಳಿಗೆ ಮುಂದಿನ ಮೂರು ತಿಂಗಳಲ್ಲಿ ಶುದ್ಧ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.