ಬೆಂಗಳೂರು: 2016 ರಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಮುಂಜಾನೆ ಕಾಂಗ್ರೆಸ್ನ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಅವರ ಸಹೋದರ ವಿಜಯ್ ಕುಲಕರ್ಣಿಯನ್ನು ವಶಕ್ಕೆ ಪಡೆದುಕೊಂಡಿದೆ.
ವಿಚಾರಣೆಗಾಗಿ ವಿನಯ್ ನನ್ನು ಶಿವಗಿರಿಯಲ್ಲಿನ ಅವರ ಮನೆಯಿಂದ ಧಾರವಾಡದ ಪೊಲೀಸ್ ಠಾಣೆಗೆ ಕರೆತರಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಜೂನ್ 15, 2016 ರಂದು ಯೋಗೇಶ್ ಗೌಡ ಅವರನ್ನು ಧಾರವಾಡದ ಸಪ್ತಾಪುರದಲ್ಲಿನ ಅವರ ಜಿಮ್ ಬಳಿಯಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ ಅಧಿಕಾರಿಗಳು ಸಹೋದರರಿಬ್ಬರನ್ನೂ ವಶಕ್ಕೆ ಪಡೆದಿದೆ.
ಇನ್ನು ಯೋಗೇಶ್ ಅವರ ಹತ್ಯೆಯ ಮರುದಿನವೇ ಈ ಹತ್ಯೆಗೆ ಸಂಬಂಧಿಸಿದಂತೆ ಬಸವರಾಜ ಮುತ್ತಗಿ ತಂಡವನ್ನು ಪೊಲೀಸರು ಬಂಧಿಸಿದ್ದರು. ಆದರೆ ಯೋಗೇಶ್ ಅವರ ಕುಟುಂಬ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಮನವಿ ಸಲ್ಲಿಸಿದ್ದರು. ಕಳೆದ ಒಂದು ವರ್ಷದಿಂದ ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪಾರಿ ಹಂತಕರನ್ನೂ ವಶಕ್ಕೆ ಪಡೆದುಕೊಂಡಿತ್ತು. ಬಂಧಿತ ಕುಲಕರ್ಣಿ ಸಹೋದರರ ಜೊತೆಗೆ ಅನೇಕ ಮಂದಿ ರಾಜಕೀಯ ಮುಖಂಡರನ್ನು ಸಹ ಸಿಬಿಐ ಈ ಹಿಂದೆ ವಿಚಾರಣೆ ನಡೆಸಿತ್ತು. ಇದೀಗ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿ, ವಿಚಾರಣೆ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.