ನವದೆಹಲಿ: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಬಿಪಿಒಗಳು ಮತ್ತು ಐಟಿಇಎಸ್ ಕಂಪೆನಿಗಳ ಹೊರೆಗೆ ಕೊಂಚ ಮಟ್ಟಿನ ನಿರಾಳತೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ, ವರ್ಕ್ ಫ್ರಂ ಎನೀವೇರ್ ಮಾಡುವ ಅವಕಾಶವನ್ನು ಈ ಮಾರ್ಗಸೂಚಿಯಲ್ಲಿ ನೀಡಲಾಗಿದೆ. ಈ ಹೊಸ ನಿಯಮದನ್ವಯ ಐಟಿ, ಬಿಪಿಒ ನೌಕರರು ಆಗಾಗ್ಗೆ ಹಾಜರಾತಿ ಹಾಕಬೇಕು ಎಂಬ ನಿಯಮವನ್ನು ಅಳಿಸಲಿದೆ. ಕೊರೋನಾ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸಕ್ಕೆ ಅವಕಾಶ ನೀಡುವಂತೆ ಉದ್ಯೋಗಿಗಳು ಬೇಡಿಕೆ ಇಡುತ್ತಿದ್ದು, ಇದೀಗ ಕೇಂದ್ರ ಸರ್ಕಾರ ಸಹ ಇದಕ್ಕೆ ಪೂರಕವಾದ ನಡೆ ಪ್ರದರ್ಶಿಸಿದೆ.
ಈ ಮಾರ್ಗಸೂಚಿಯಲ್ಲಿ ಬ್ಯುಸಿನೆಸ್ ಪ್ರೊಸೆಸ್ ಔಟ್ ಸೋರ್ಸಿಂಗ್, ನಾಲೆಡ್ಜ್ ಪ್ರೊಸೆಸ್ ಔಟ್ ಸೋರ್ಸಿಂಗ್, ಕಾಲ್ ಸೆಂಟರ್ಗಳು, ಐಟಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿದೆ. ಮನೆಯಿಂದಲೇ ಕೆಲಸ ಎಂಬ ಪರಿಕಲ್ಪನೆಯನ್ನು ಉತ್ತೇಜಿಸುವುದು, ಎಲ್ಲಿಂದ ಬೇಕಾದರೂ ಕಾರ್ಯ ನಿರ್ವಹಿಸುವ ವ್ಯವಸ್ಥೆಗೆ ಪೂರಕವಾಗುವಂತೆ ಉತ್ತೇಜಿಸುವುದು ಈ ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾದ ಕ್ರಮಗಳ ಒಟ್ಟು ಉದ್ದೇಶ ಎಂದು ಟೆಲಿಕಾಂ ಇಲಾಖೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.