ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಘೋಷಣೆ ‘ಕನ್ನಡ ಕಾಯಕ ವರ್ಷಾಚರಣೆ 2020’ ಕ್ಕೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧಪಡಿಸಿರುವ ಲಾಂಛನವನ್ನು ಅಧ್ಯಕ್ಷ ಟಿ ಎಸ್ ನಾಗಾಭರಣ ಅವರು ಲೋಕಾರ್ಪಣೆ ಮಾಡಿದ್ದಾರೆ.
ವಿಧಾನಸೌಧದ ಕಛೇರಿಯಲ್ಲಿ ಲಾಂಛನ ಬಿಡುಗಡೆ ಮತ್ತು ಕನ್ನಡ ಕಾಯಕ ವರ್ಷಾಚರಣೆಗೆ ಅವರು ಚಾಲನೆ ನೀಡಿದರು. ಆಡಳಿತ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ತಾಂತ್ರಿಕತೆಗಳ ಮೂಲಕ ಕನ್ನಡವನ್ನು ಬಳಕೆ ಮಾಡುವುದು, ಭಾಷೆಗೆ ವಿಶ್ವಮಾನ್ಯತೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕನ್ನಡ ಪ್ರಾಧಿಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ಹೇಳಿದರು.
ರಾಜ್ಯ, ಹೊರ ರಾಜ್ಯದ ಜನರಿಗೆ ಕನ್ನಡ ಕಲಿಕೆಗೆ ಅನುಕೂಲವಾಗುವಂತೆ ಇ- ಕನ್ನಡ ಕಲಿಕಾ ಪೋರ್ಟಲ್ ಆರಂಭಿಸಲಾಗಿದೆ. ಇದರಲ್ಲಿ ಕನ್ನಡಕ್ಕೆ ಸಂಬಂಧಿಸಿದಂತೆ ಇರು. ವಿಚಾರಗಳನ್ನು ಕಾಲ ಕಾಲಕ್ಕೆ ಪ್ರಕಟಿಸಲಾಗುವುದು. ಇದು ಜನರಿಗೆ ಉದ್ಯೋಗ ಪಡೆಯುವ ನಿಟ್ಟಿನಲ್ಲಿಯೂ ಪೂರಕವಾಗಲಿದೆ. ಜೊತೆಗೆ ಉನ್ನತ ಶಿಕ್ಷಣದಲ್ಲಿ ಅವಕಾಶ ಸಿಗುವ ನಿಟ್ಟಿನಲ್ಲಿ ಕನ್ನಡ ಭಾಷಾ ಕೌಶಲ ಆನ್ಲೈನ್ ಪರೀಕ್ಷೆಯನ್ನೂ ಆಯೋಜನೆ ಮಾಡಲಾಗುತ್ತದೆ ಎಂದು ನಾಗಾಭರಣ ಹೇಳಿದ್ದಾರೆ.
ರಾಜ್ಯ ಸರ್ಕಾರದ ಅಡಿಯಲ್ಲಿ ಇರುವ ಸಾವಿರಕ್ಕೂ ಅಧಿಕ ಜಾಲತಾಣಗಳನ್ನು ಕನ್ನಡಮಯ ಗೊಳಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಪ್ರಾಥಮಿಕ ಹಂತದ ಶಿಕ್ಷಣವನ್ನು ಕನ್ನಡದಲ್ಲೇ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಶಯವೂ ಪ್ರಾಧಿಕಾರದ್ದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.