ಬೆಂಗಳೂರು: ರಾಜ್ಯದ ನಾಲ್ಕು ಕಡೆಗಳಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಂಗಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ 19.50 ಕೋಟಿ ರೂ. ಬಿಡುಗಡೆ ಮಾಡಿದೆ.
ರಾಜ್ಯದ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಮತ್ತು ವಿವಿಧೋದ್ದೇಶ ಬಳಕೆಗೆ ಪೂರಕವಾದ ಸಭಾಂಗಣಗಳನ್ನು ಹೊಂದಿರುವಂತಹ ಕ್ರೀಂಡಾಗಣ ನಿರ್ಮಾಣದ ಉದ್ದೇಶವನ್ನು ಈ ಯೋಜನೆ ಹೊಂದಿದೆ.
ಕಾರ್ಕಳ, ಚಿಕ್ಕಮಗಳೂರು, ಕೊಪ್ಪಳ ಗಳಲ್ಲಿ ಈ ಕ್ರೀಂಡಾಗಣ ನಿರ್ಮಾಣ ಆಗಲಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಒತ್ತಾಸೆಯಂತೆ, ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಕಿರೇಣ್ ರಿಜಿಜು ರಾಜ್ಯದಲ್ಲಿ ಒಳಾಂಗಣ ಮತ್ತು ವಿವಿಧೋದ್ದೇಶ ಕ್ರೀಡಾಂಗಣ ನಿರ್ಮಾಣ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಈ ಹಿಂದೆ ಸಿ.ಟಿ ರವಿ ಅವರು ದೆಹಲಿಗೆ ಹೋಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಕಿರೇಣ್ ರಿಜಿಜು ಅವರಲ್ಲಿ ಮನವಿ ಸಲ್ಲಿಸಿದ್ದರು.
ಕಾರ್ಕಳದಲ್ಲಿ 3.50 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಚಿಕ್ಕಮಗಳೂರಿನಲ್ಲಿ 4.50 ಕೋಟಿ ರೂ. ಗಳಲ್ಲಿ ವಿವಿಧೋದ್ದೇಶ ಬಳಕೆಯ ಒಳಾಂಗಣ ಕ್ರೀಡಾಂಗಣ ಮತ್ತು ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ 7 ಕೋಟಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ 4.50 ಕೋಟಿ ರೂ. ಗಳಲ್ಲಿ ಈ ಕ್ರೀಡಾಂಗಣ ನಿರ್ಮಾಣವಾಗಲಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿ ಟಿ ರವಿ ಅವರು, ಕಿರೇಣ್ ರಿಜಿಜು ಮತ್ತು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
Thank Prime Minister Sri @narendramodi and Sports Minister Sri @KirenRijiju for releasing Rs. 19.5 crore towards building full fledged stadiums in Karnataka.
This grant under the “Khelo India” program will be put to efficient use in order to benefit Our Sports persons.
— C T Ravi 🇮🇳 ಸಿ ಟಿ ರವಿ (@CTRavi_BJP) November 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.