ಬೆಂಗಳೂರು: ಹಗಲಿರುಳು ಎನ್ನದೆ ರಾಜ್ಯದ ಕೆಲವೆಡೆ ಬೀದಿ ದೀಪಗಳು ಉರಿಯುವುದು ದಿನ ನಿತ್ಯದ ಸಮಸ್ಯೆಯಾಗಿದೆ. ಜೊತೆಗೆ ಇದರಿಂದ ವಿದ್ಯುತ್ ಪೋಲಾಗುತ್ತಿದೆ. ಈ ಸಮಸ್ಯೆಯನ್ನು ತಡೆಯಲು ರಾಜ್ಯ ಸರ್ಕಾರ ಹೊಸ ಕ್ರಮವೊಂದರ ಜಾರಿಗೆ ಮುಂದಾಗಿದೆ.
ಸಾಫ್ಟ್ವೇರ್ ಮೂಲಕ ಕಾರ್ಯ ನಿರ್ವಹಿಸುವ ನಿಯಂತ್ರಣ ಮತ್ತು ಮೇಲ್ವಿಚಾರಣಾ ವ್ಯವಸ್ಥೆ (ಸಿಸಿಎಂಎಸ್) ಜಾರಿಗೆ ಮುಂದಾಗಿದೆ. ಒಂದೇ ಕಡೆ ಕುಳಿತು ನಗರದ ಎಲ್ಲಾ ಬೀದಿ ದೀಪಗಳನ್ನು ಏಕಕಾಲಕ್ಕೆ ಬೆಳಗುವ, ಆರಿಸುವುದಕ್ಕೆ ಸೂಕ್ತ ಅವಕಾಶವನ್ನು ಈ ವ್ಯವಸ್ಥೆ ಕಲ್ಪಿಸುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆಯ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಇದರ ಸಾಧಕ ಬಾಧಕಗಳ ಪರಿಶೀಲನೆ ನಡೆಸಿ, ಬಳಿಕ ಇದನ್ನು ಸಂಪೂರ್ಣ ರಾಜ್ಯದಲ್ಲಿ ಅಳವಡಿಸಲು ಪೂರಕ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ. ಈ ಯೋಜನೆಯಿಂದ 50% ವಿದ್ಯುತ್ ಉಳಿತಾಯದ ಜೊತೆಗೆ ರಾಜ್ಯದ ಬೊಕ್ಕಸಕ್ಕೂ ಹೆಚ್ಚು ಉಳಿತಾಯವಾಗುವ ಸಾಧ್ಯತೆ ಇದ್ದು, ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ನಗರದ ಹಲವೆಡೆ ಹಲವು ಸಮಸ್ಯೆಗಳಿಂದ, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ, ಸ್ವಿಚ್ಗಳ ಸಮಸ್ಯೆಯಿಂದಾಗಿ ವಿದ್ಯುತ್ ಪೋಲಾಗುವಂತಾಗಿದೆ. ಈ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ವಿನಾ ಕಾರಣ ಸಂಪತ್ತಿನ ಸೋರಿಕೆಯಾಗುವುದನ್ನು ತಡೆಯಲು ರಾಜ್ಯ ಸರ್ಕಾರ ಈ ಆಧುನಿಕ ಕ್ರಮದ ಜಾರಿಗೆ ಮುಂದಾಗಿದೆ. ಜೊತೆಗೆ ಬೀದಿ ದೀಪಗಳಲ್ಲಿ ಎಲ್ಇಡಿ ಲೈಟ್ ಅಳವಡಿಕೆಗೂ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದೆ. ಖಾಸಗಿ ಸಹಭಾಗಿತ್ವದ ಜೊತೆಗೆ ಈ ಹೊಸ ಕ್ರಮ ಅಳವಡಿಸುವುದಾಗಿಯೂ ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.