ಬೆಂಗಳೂರು: ಮುಂದಿನ ದಿನಗಳಲ್ಲಿ ಜನೌಷಧ ಕೇಂದ್ರಗಳಲ್ಲಿ ಕಡಿಮೆ ದರಗಳಿಗೆ ಲಭ್ಯವಾಗುವಂತೆ ಆಯುರ್ವೇದಿಕ್ ಔಷಧಿಗಳನ್ನು ಮಾರಾಟ ಮಾಡುವ ಕಾರ್ಯಕ್ಕೆ ಅವಕಾಶ ನೀಡಲಾಗುವುದು ಎಂದು ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ತಿಳಿಸಿದ್ದಾರೆ.
ಅವರು ಹುಬ್ಬಳ್ಳಿಯಲ್ಲಿ ಪಿಎಂ ಜನೌಷಧ ಕೇಂದ್ರದ ಪ್ರಾಂತೀಯ ಕಛೇರಿಯನ್ನು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೌಷಧ ಕೇಂದ್ರಗಳು ದೇಶದಾದ್ಯಂತ ಬಡ ವರ್ಗಕ್ಕೆ ಕೈಗೆಟಕುವ ದರದಲ್ಲಿ, ಗುಣಮಟ್ಟದ ಔಷಧ ದೊರೆಯುವಂತೆ ಮಾಡಿದೆ. ಜನೌಷಧ ಕೇಂದ್ರಗಳ ಮೂಲಕ ಜನರಿಗೆ 19%-90% ವರೆಗೆ ಔಷಧಗಳು ರಿಯಾಯಿತಿ ದರದಲ್ಲಿ ದೊರೆಯುತ್ತಿವೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.
ಇದಕ್ಕೆ ಪೂರಕವಾಗಿ ಎಂಬಂತೆ ಜನರಿಕ್ ಮೆಡಿಸಿನ್ ಅಪ್ಲಿಕೇಶನ್ ನಮ್ಮಲ್ಲಿದ್ದು, ಇದು ಸಮೀಪದಲ್ಲಿ ಇರುವ ಜನೌಷಧ ಕೇಂದ್ರ, ಬೇಕಿರುವ ಔಷಧಗಳ ಮಾಹಿತಿಯನ್ನು ನೀಡುತ್ತದೆ. ರಾಜ್ಯದ ಹಲವು ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಸುಮಾರು 1000 ಜನೌಷಧ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಅದರಂತೆ ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಆಸ್ಪತ್ರೆಗಳಲ್ಲಿಯೂ ಜನೌಷಧ ಕೇಂದ್ರಗಳನ್ನು ತೆರೆಯುವ ಬಗ್ಗೆ ರಾಜ್ಯ ಆರೋಗ್ಯ ಸಚಿವ ಡಾ ಸುಧಾಕರ್ ಜೊತೆಗೂ ಮಾತುಕತೆ ನಡೆಸಿರುವುದಾಗಿ ಅವರು ಹೇಳಿದ್ದಾರೆ. ಹೀಗಾದಲ್ಲಿ ಜನಸಾಮಾನ್ಯರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.