ನವದೆಹಲಿ: ಪೂರ್ವ ಲಡಾಖ್ ಭಾಗದ ಎಲ್ಎಸಿ ಬಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಶಮನವಾಗಿಲ್ಲ. ವಾಸ್ತವ ಗಡಿ ನಿಯಂತ್ರಣ ರೇಖೆ ಬದಲಾವಣೆಯನ್ನು ಭಾರತ ಒಪ್ಪುವುದಿಲ್ಲ. ಈ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ತಿಳಿಸಿದ್ದಾರೆ.
ಈ ಸಂಬಂಧ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಚೀನಾದ ಎಲ್ಲಾ ರೀತಿಯ ಕುತಂತ್ರಗಳಿಗೂ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. ಚೀನಾಗೆ ಅನಿರೀಕ್ಷಿತ ಪರಿಸ್ಥಿತಿಯನ್ನು ನಿರ್ಮಾಣ ಮಾಡುವ ಮೂಲಕ ಭಾರತ ಪಾಠ ಕಲಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ವಾಸ್ತವ ಗಡಿ ರೇಖೆ ಬದಲಾವಣೆಗೆ ಭಾರತ ಒಪ್ಪುವುದಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾವತ್ ಸ್ಪಷ್ಟಪಡಿಸಿದ್ದಾರೆ.
ದೇಶದ ಗಡಿ ಭಾಗದಲ್ಲಿ ಶತ್ರು ರಾಷ್ಟ್ರಗಳಿಂದ ಉಂಟಾಗುತ್ತಿರುವ ಅಪ್ರಚೋದಿತ ದಾಳಿ, ನಿಯಮ ಉಲ್ಲಂಘನೆಗಳು ಸಂಘರ್ಷದ ಹಾದಿ ಹಿಡಿಯದಂತೆ ಭಾರತದ ಸೇನೆ ಎಚ್ಚರ ವಹಿಸುತ್ತದೆ ಎಂದು ಅವರು ತಿಳಿಸಿದರು. ಜೊತೆಗೆ ಪಾಕಿಸ್ಥಾನದ ಉಗ್ರಗಾಮಿಗಳ ಉಪಟಳ ಮತ್ತು ಅದನ್ನು ಭಾರತೀಯ ಸೇನೆ ನಿಭಾಯಿಸುತ್ತಿರುವ ರೀತಿಯನ್ನು ಇದೇ ಸಂದರ್ಭದಲ್ಲಿ ರಾವತ್ ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.