ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ದೆಹಲಿ ಗಲಭೆ ಸಂಚುಕೋರ ಉಮರ್ ಖಲಿದ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಆಗಿರುವ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ)ಯಡಿ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) ಅನುಮತಿ ನೀಡಿದೆ ಎಂದು ವರದಿಗಳು ತಿಳಿಸಿವೆ.
ಕಾನೂನಿನ ಪ್ರಕಾರ, ಯುಎಪಿಎಯ ಕಠಿಣ ನಿಬಂಧನೆಗಳ ಅಡಿಯಲ್ಲಿ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸುವ ಮೊದಲು ಗೃಹ ಸಚಿವಾಲಯದ ಅನುಮತಿಯನ್ನು ಪಡೆಯಬೇಕು.
ಉಮರ್ ಖಲಿದ್ನನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಕಳೆದ ತಿಂಗಳು, ದೆಹಲಿಯ ಕಾರ್ಕಾರ್ದುಮಾ ನ್ಯಾಯಾಲಯವು ಉಮರ್ ಖಲಿದ್ ನ್ಯಾಯಾಂಗ ಬಂಧನವನ್ನು 30 ದಿನಗಳವರೆಗೆ ವಿಸ್ತರಿಸಿದೆ. ಆತ ನವೆಂಬರ್ 20 ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾನೆ.
ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ದೆಹಲಿ ಪೊಲೀಸರ ವಿಶೇಷ ಘಟಕ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಪ್ರಸ್ತುತ ಆತನನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಭೀಕರವಾದ ಈಶಾನ್ಯ ದೆಹಲಿ ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ ದೆಹಲಿ ಪೊಲೀಸರು ಸೆಪ್ಟೆಂಬರ್ 14 ರಂದು ಉಮರ್ ಖಲಿದ್ನನ್ನು ಬಂಧಿಸಿದ್ದರು. ಫೆಬ್ರವರಿ 24 ರಂದು ದೆಹಲಿಯ ಚಂದ್ ಬಾಗ್ ಪ್ರದೇಶದಲ್ಲಿ ಗಲಭೆಗಳನ್ನು ಪ್ರಚೋದಿಸಿದ್ದಕ್ಕೆ ಬಂಧಿತರಾದ 15 ಜನರಲ್ಲಿ ಖಾಲಿದ್ ಕೂಡ ಒಬ್ಬ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.