ಮುಂಬಯಿ: ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ. ಮಹಾರಾಷ್ಟ್ರ ವಿಧಾನಸಭೆಯ ಕಾರ್ಯದರ್ಶಿಗೆ ತನ್ನ ಮುಂದೆ ಹಾಜರಾಗುವಂತೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪತ್ರಕರ್ತ ಅರ್ನಬ್ ಗೋಸ್ವಾಮಿಗೆ ಬರೆದಿರುವ ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಕ್ರಮಗಳನ್ನು ಏಕೆ ಕೈಗೊಳ್ಳಬಾರದು ಎಂದು ಪ್ರಶ್ನಿಸಿದೆ.
ಮಹಾರಾಷ್ಟ್ರ ವಿಧಾನಸಭೆ ತನ್ನ ವಿರುದ್ಧ ಸಲ್ಲಿಸಿದ್ದ ವಿಶೇಷಾಧಿಕಾರ ಉಲ್ಲಂಘನೆ ನೋಟಿಸ್ ಅನ್ನು ಪ್ರಶ್ನಿಸಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರ ನೇತೃತ್ವ ಸುಪ್ರೀಂ ಕೋರ್ಟ್ ನ್ಯಾಯಪೀಠ, ಅರ್ನಬ್ ಗೋಸ್ವಾಮಿಗೆ ಬರೆದ ಪತ್ರಕ್ಕಾಗಿ ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿ ವಿರುದ್ಧ ವಾಗ್ದಾಳಿ ನಡೆಸಿದೆ.
ಅಲ್ಲದೇ, ವಿಧಾನಸಭೆ ಕಳುಹಿಸಿದ ನೋಟಿಸ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ನಬ್ ಕ್ರಮವನ್ನು ವಿರೋಧಿಸಲು ನಿಮಗೆ ಅಧಿಕಾರವಿಲ್ಲ ಎಂದಿದೆ.
“ಯಾರಿಗಾದರೂ ಈ ರೀತಿಯ ಬೆದರಿಕೆ ಹಾಕಲು ಹೇಗೆ ಸಾಧ್ಯ? ಈ ರೀತಿಯ ಬೆದರಿಕೆಗಳನ್ನು ಪಡೆದ ಬಳಿಕವೂ ಯಾರಾದರೂ ನ್ಯಾಯಾಲಯವನ್ನು ಸಂಪರ್ಕಿಸುವುದನ್ನು ತಡೆಯುವುದು ಹೇಗೆ? ಈ ನ್ಯಾಯಾಲಯಕ್ಕೆ ಪ್ರವೇಶಿಸುವ ಬಗ್ಗೆ ಮಾತ್ರ ನಮಗೆ ಕಾಳಜಿ ಇದೆ. ನೀವು ಇದನ್ನು ನ್ಯಾಯಾಲಯದಲ್ಲಿ ಹೇಗೆ ಹಾಜರುಪಡಿಸಬೇಕು ಎಂದು ಹೇಳುವ ಮೂಲಕ ಜನರನ್ನು ಪರೋಕ್ಷವಾಗಿ ಬೆದರಿಸಲು ಸಾಧ್ಯವಿಲ್ಲ. ಈ ಜನರು ಯಾರು? ಈ ವಿಷಯದಲ್ಲಿ ನಮಗೆ ಸಹಾಯ ಮಾಡುವ ಸ್ವತಂತ್ರ ಸಲಹೆಗಾರರನ್ನು ನಾವು ಬಯಸುತ್ತೇವೆ ”ಎಂದು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಹೇಳಿದ್ದಾರೆ.
ಸುಪ್ರೀಂಕೋರ್ಟ್ ನೀಡಿರುವ ಸೂಚನೆ ಮಹಾ ಸರ್ಕಾರಕ್ಕೆ ಮುಖಭಂಗ ತಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.