ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಜನರಿಗೆ ಹೊಸ ಆವಿಷ್ಕಾರಗಳನ್ನು ಮಾಡುವಂತೆ ಕರೆ ನೀಡಿದ್ದು, ಯುವಕರಿಗೆ ಸುಲಲಿತ ವ್ಯಾಪಾರ ಮಾಡಲು ವಾತಾವರಣ ಸೃಷ್ಟಿಸುವ ಬಗ್ಗೆ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ಆವಿಷ್ಕಾರಗಳ ಮೂಲಕ ಸುಲಲಿತ ಜೀವನ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಯುವಕರಿಗೆ ಮನವಿ ಮಾಡಿದ್ದಾರೆ.
ಇಂದು ಐಐಟಿ ದೆಹಲಿಯ 51 ನೇ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಆತ್ಮನಿರ್ಭರ ಭಾರತ್ ಅಭಿಯಾನದ ಯಶಸ್ಸಿಗೆ ನಾವೀನ್ಯತೆ ಪ್ರಮುಖ ಶಕ್ತಿಯಾಗಿದೆ. ಜಾಗತೀಕರಣದ ಜೊತೆಗೆ ಸ್ವಾವಲಂಬನೆಯೂ ಅಷ್ಟೇ ಮುಖ್ಯ ಎಂದು ಒತ್ತಿ ಹೇಳಿದರು.
ಕೋವಿಡ್ನಿಂದ ಉಂಟಾದ ಬಿಕ್ಕಟ್ಟಿನ ಅವಧಿಯು ಜಗತ್ತಿನಲ್ಲಿ ದೊಡ್ಡ ಬದಲಾವಣೆಗಳನ್ನು ತಂದಿದೆ ಮತ್ತು ಕೋವಿಡ್ ನಂತರದ ಜಗತ್ತಿನಲ್ಲಿ ತಂತ್ರಜ್ಞಾನವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಹೊಸ ಉದ್ಯಮಗಳಿಗೆ ಹೆಚ್ಚು ಸಾಮರ್ಥ್ಯವನ್ನು ಸೃಷ್ಟಿಸುವುದು ಇದೇ ಮೊದಲು, ಖಾಸಗಿ ವಲಯದಲ್ಲಿ ಇನ್ನೂ ಹೆಚ್ಚಿನ ಹೂಡಿಕೆ ಮಾರ್ಗಗಳನ್ನು ತೆರೆಯಲಾಗಿದೆ ಎಂದು ಮೋದಿ ಹೇಳಿದ್ದಾರೆ. ಸುಲಲಿತ ವ್ಯಾಪಾರಕ್ಕಾಗಿ ಬಿಪಿಓ ವಲಯದಲ್ಲಿ ಪ್ರಮುಖ ಉಪಕ್ರಮವನ್ನು ತರಲಾಗಿದೆ ಎಂದು ಅವರು ಹೇಳಿದರು. ಇಂದಿನ ಯುವಕರು ಗುಣಮಟ್ಟಕ್ಕೆ ಗಮನ ಕೊಡಬೇಕು, ಸ್ಕೇಲೆಬಿಲಿಟಿಯನ್ನು ಖಚಿತಪಡಿಸಿಕೊಳ್ಳಬೇಕು, ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಹೊಂದಿಕೊಳ್ಳಬಲ್ಲ ಸ್ವಭಾವ ಹೊಂದಿರಬೇಕು ಎಂದರು.
ತಮ್ಮ ಸರ್ಕಾರ ಹೊಸ ಕಾನೂನುಗಳನ್ನು ತಂದಿದೆ ಮತ್ತು ಇಂದು ಭಾರತವು ವಿಶ್ವದ ಅತ್ಯಂತ ಕಡಿಮೆ ಕಾರ್ಪೊರೇಟ್ ತೆರಿಗೆ ವಿಧಿಸುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ಹೇಳಿದರು.
ಕಳೆದ 5 ವರ್ಷಗಳಲ್ಲಿ ಪೇಟೆಂಟ್ಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ, ಟ್ರೇಡ್ಮಾರ್ಕ್ ನೋಂದಣಿಯು ಐದು ಪಟ್ಟು ಹೆಚ್ಚಾಗಿದೆ. ಫಿನ್ಟೆಕ್, ಕೃಷಿ ಮತ್ತು ವೈದ್ಯಕೀಯ ಸ್ಟಾರ್ಟ್ ಅಪ್ ಗಳು ಬೆಳವಣಿಗೆಯನ್ನು ಕಾಣುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ 20 ಕ್ಕೂ ಹೆಚ್ಚು ಯುನಿಕಾರ್ನ್ಗಳನ್ನು ಭಾರತೀಯರು ನಿರ್ಮಿಸಿದ್ದಾರೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಮೂಲಸೌಕರ್ಯ ಪೈಪ್ಲೈನ್ ಅಡಿಯಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡುತ್ತಿದೆ ಎಂದು ಮೋದಿ ಹೇಳಿದರು. ಇಡೀ ದೇಶದಲ್ಲಿ ಅತ್ಯಾಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತಿದ್ದು, ಅದು ಪ್ರಸ್ತುತ ಮತ್ತು ಭವಿಷ್ಯದ ಅಗತ್ಯಗಳನ್ನು ಪೂರೈಸುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.