ನವದೆಹಲಿ: ಸುಮಾರು 500 ವರ್ಷಗಳ ನಂತರ, ದೀಪಾವಳಿಯಂದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಹಣತೆಗಳನ್ನು ಬೆಳಗಿಸಲಾಗುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನವೆಂಬರ್ 13 ರಂದು ನಗರದಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮದ ಸಂದರ್ಭದಲ್ಲಿ ದೀಪಗಳನ್ನು ಬೆಳಗಿಸಲಿದ್ದಾರೆ.
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಪ್ರಕಾರ, “ಈ ವರ್ಷ ನಿಜವಾದ ದೀಪಾವಳಿಯಾಗಲಿದೆ, ಸುದೀರ್ಘ ವರ್ಷಗಳ ನಂತರ ಭಗವಾನ್ ರಾಮ ತನ್ನ ಜನ್ಮಭೂಮಿಗೆ ಹಿಂದಿರುಗಿದ ಸಂಭ್ರಮದ ಆಚರಣೆಯಾಗಿದೆ” ಎಂದಿದ್ದಾರೆ.
ದೀಪಾವಳಿಯ ಸಂದರ್ಭದಲ್ಲಿ 5 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ನೀಲಕಂಠ ತಿವಾರಿ ಹೇಳಿದ್ದಾರೆ. “ಕರೋನವೈರಸ್ ಸಾಂಕ್ರಾಮಿಕ ಇಲ್ಲದಿದ್ದರೆ, ಲಕ್ಷಾಂತರ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು” ಎಂದಿದ್ದಾರೆ.
ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸಿ ‘ದೀಪೋತ್ಸವ 2020’ ಸಂದರ್ಭದಲ್ಲಿ ಪ್ರತಿದಿನ ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಈಗಾಗಲೇ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ಅಯೋಧ್ಯೆಯ ರಾಮ್ ಕಿ ಪೈಡಿಯಲ್ಲಿ ಸುಮಾರು 5.51 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಲಾಗುತ್ತದೆ.
ದೀಪಾವಳಿಯಂದು ಪವಿತ್ರ ನಗರದಲ್ಲಿ ಎಲ್ಲಾ ಮಠಗಳು ಮತ್ತು ಮನೆಗಳು ದೀಪಗಳಿಂದ ಪ್ರಕಾಶಿಸಲ್ಪಡುವ ನಿರೀಕ್ಷೆ ಇದೆ. ಮಠಗಳಲ್ಲಿ ‘ಭಜನೆ’ ಮತ್ತು ರಾಮಾಯಣ ಪಠಣಗಳನ್ನು ಮಾಡಲಾಗುತ್ತದೆ. ಅಯೋಧ್ಯೆ ಭವ್ಯವಾದ ದೀಪಾಲಂಕಾರದಿಂದ ಕಂಗೊಳಿಸಲಿದೆ.
ಅಯೋಧ್ಯೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ದೀಪೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಾ ಬಂದಿದೆ. ಆದರೆ ರಾಮಜನ್ಮಭೂಮಿಯಲ್ಲಿ ಈ ಬಾರಿ ದೀಪೋತ್ಸವ ವಿಶೇಷವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.