ಬೆಂಗಳೂರು: ಕೊರೋನಾ ಸಂಕಷ್ಟದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಆಗಬಾರದು. ಈ ಹಿನ್ನೆಲೆಯಲ್ಲಿ ವಿಶ್ವ ವಿದ್ಯಾಲಯಗಳು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳನ್ನು ನೀಡಲು ಪೂರಕ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಕೊರೋನಾ ಹಿನ್ನೆಲೆಯಲ್ಲಿ ವಿವಿಗಳ ಘಟಿಕೋತ್ಸವ ಮುಂದೂಡಲಾಗಿದೆ. ಇದರಿಂದ ಪ್ರಮಾಣಪತ್ರಗಳನ್ನು ಹೊಂದದೆ ವಿದ್ಯಾರ್ಥಿಗಳು ಪರದಾಡುವಂತಾಗಬಾರದು. ಹಾಗಾಗಿ ಪದವಿ ಪ್ರಮಾಣಪತ್ರಕ್ಕೆ ಸಮವೆಂದು ಪರಿಗಣಿಸಲ್ಪಡುವ ಪ್ರಮಾಣಪತ್ರಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವಂತೆ ಸೂಚಿಸಿದೆ. ಈ ಸಂಬಂಧ ವಿದ್ಯಾರ್ಥಿಯೊಬ್ಬರು ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಉಪಕ್ರಮವನ್ನು ಕೈಗೊಳ್ಳುವಂತೆ ಕೋರ್ಟ್ ಹೇಳಿದೆ.
ಸಾಮಾನ್ಯ ಸಂದರ್ಭದಲ್ಲಿ ಘಟಿಕೋತ್ಸವದ ಸಂದರ್ಭದಲ್ಲಿಯೇ ಪ್ರಮಾಣ ಪತ್ರ, ಅಂಕಪಟ್ಟಿ ಸಿಗುತ್ತದೆ. ಆದರೆ ತಾತ್ಕಾಲಿಕ ಪ್ರಮಾಣಪತ್ರಗಳನ್ನು ಒದಗಿಸುವುದಕ್ಕೂ ವಿವಿಗಳ ನಿಯಮದಲ್ಲಿ ಅವಕಾಶ ಇದೆ ಎಂದು ಕೋರ್ಟ್ಗೆ ವಕೀಲರು ತಿಳಿಸಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತೀರಾ ಅವಶ್ಯ ಎಂದು ವಕೀಲರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಈ ಅರ್ಜಿಯನ್ನು ಸಲ್ಲಿಸಿದ್ದ ವಿದ್ಯಾರ್ಥಿಗೆ 2 ವಾರಗಳಲ್ಲಿ ತಾತ್ಕಾಲಿಕ ದಾಖಲೆಗಳನ್ನು ಒದಗಿಸಬೇಕು. ಇಲ್ಲವೇ ಪ್ರತಿ ವಾರಕ್ಕೆ 5 ಸಾವಿರ ರೂ. ಗಳಂತೆ ದಂಡ ಪಾವತಿಸಬೇಕು ಎಂದು ಸಂಬಂಧಪಟ್ಟ ವಿವಿಗೆ ಹೈಕೋರ್ಟ್ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.