ಬೆಂಗಳೂರು: ರಾಜ್ಯದಲ್ಲಿ ನ. 3ರಂದು ನಡೆದಿದ್ದ ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣಾ ಮತ ಎಣಿಕೆ, ಫಲಿತಾಂಶ ನಾಳೆ ಪ್ರಕಟವಾಗಲಿದೆ.
ಈ ಸಂಬಂಧ ಚುನಾವಣಾ ಆಯೋಗ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮರು ದಿನ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಈ ಎರಡೂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಈ ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ. ಈ ಪೈಕಿ ಯಾವ ಅಭ್ಯರ್ಥಿಗೆ ಮತದಾರ ತನ್ನ ಅಮೂಲ್ಯ ಮತಗಳನ್ನು ನೀಡಿದ್ದಾನೆ ಎಂಬುದಕ್ಕೂ ನಾಳಿನ ಮತ ಎಣಿಕೆ, ಫಲಿತಾಂಶ ಉತ್ತರ ನೀಡಲಿದೆ. ಒಟ್ಟಿನಲ್ಲಿ ಹೇಳುವುದಾದರೆ ನಾಳಿನ ಫಲಿತಾಂಶದ ಬಗ್ಗೆ ಮೂರೂ ಪಕ್ಷಗಳೂ ಹೆಚ್ಚಿನ ನಿರೀಕ್ಷೆ ಇರಿಸಿಕೊಂಡಿದ್ದು, ಈ ಪೈಕಿ ಗೆಲುವು ಯಾರದ್ದು ಎಂದು ಕಾದು ನೋಡಬೇಕಿದೆ.
ಜೊತೆಗೆ ಮೊನ್ನೆ ನಡೆದ ವಿಧಾನ ಪರಿಷತ್ನ 4 ಕ್ಷೇತ್ರಗಳ (2 ಶಿಕ್ಷಕರ ಕ್ಷೇತ್ರ, 2 ಪದವೀಧರ ಕ್ಷೇತ್ರ) ಮತ ಎಣಿಕೆ, ಫಲಿತಾಂಶ ಸಹ ನಾಳೆಯೇ ಪ್ರಕಟವಾಗಲಿದೆ. ಒಟ್ಟಿನಲ್ಲಿ ಈ ಎರಡೂ ಫಲಿತಾಂಶಕ್ಕಾಗಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಕಾತರದಿಂದ ಕಾಯುತ್ತಿರುವುದು ಮಾತ್ರ ಸುಳ್ಳಲ್ಲ. ಒಟ್ಟಿನಲ್ಲಿ ಅಭ್ಯರ್ಥಿಗಳು ಮತ್ತು ಅವರನ್ನು ಕಣಕ್ಕಿಳಿಸಿದ ಪಕ್ಷಗಳ ಮನಸ್ಸಿನಲ್ಲಿ ಈಗಾಗಲೇ ಸೋಲು-ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿವೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.