ನವದೆಹಲಿ: ಸ್ಥಳೀಯ ಉತ್ಪನ್ನಗಳೊಂದಿಗೆ ಈ ವರ್ಷ ದೀಪಾವಳಿಯನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ. ಅವರು ಈ ವರ್ಷ LOCAL FOR DIWALI ಎಂಬ ಧ್ಯೇಯದೊಂದಿಗೆ ಹಬ್ಬದ ಆಚರಣೆ ಮಾಡುವಂತೆ ಮನವಿ ಮಾಡಿದ್ದಾರೆ. ಸ್ಥಳೀಯವಾಗಿ ತಯಾರಿಸಿದ ವಸ್ತುಗಳೊಂದಿಗೆ ದೀಪಾವಳಿಯನ್ನು ಆಚರಿಸುವುದು ನಮ್ಮ ಬದ್ಧತೆ ಮತ್ತು ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಹಬ್ಬಗಳ ಈ ಖರೀದಿಯ ಸಂದರ್ಭದಲ್ಲಿ ವೋಕಲ್ ಫಾರ್ ಲೋಕಲ್ ಮಂತ್ರವನ್ನು ನಾವು ಮರೆಯಬಾರದು. ಪ್ರತಿ ಖರೀದಿಯಲ್ಲೂ ಸ್ಥಳೀಯತೆಯ ಬಗ್ಗೆ ಗಮನಹರಿಸುವುದು ಬಹುಮುಖ್ಯ ಎಂದರು.
ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ 30 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗದ ಹೊರತಾಗಿಯೂ ತಮ್ಮ ಕ್ಷೇತ್ರಗಳಲ್ಲಿ ಬಂಪರ್ ಬೆಳೆಗಳನ್ನು ಉತ್ಪಾದಿಸಿದ ರೈತರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಆರೋಗ್ಯ ಕ್ಷೇತ್ರದಲ್ಲಿ ನಂಬಲಾಗದ ಕೆಲಸಗಳು ನಡೆದಿವೆ ಮತ್ತು ಈಗ ವಾರಣಾಸಿ ರಾಜ್ಯದ ಪೂರ್ವ ಭಾಗಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೂ ಆರೋಗ್ಯ ಸೌಲಭ್ಯಗಳ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ಹೇಳಿದರು.
ಕಳೆದ 6 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ವಾರಣಾಸಿಯಲ್ಲಿ ಸಂಭವಿಸಿದೆ ಮತ್ತು ಅನೇಕ ಯೋಜನೆಗಳು ನಗರದ ನೋಟವನ್ನು ಬದಲಿಸಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.