ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಕೃಷಿ ಮೇಳ-2020 ನ್ನು ನ. 11 ರಿಂದ ತೊಡಗಿದಂತೆ ಮೂರು ದಿನಗಳ ಕಾಲ ಹೆಬ್ಬಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ನಡೆಸಲು ಕ್ರಮ ಕೈಗೊಂಡಿದೆ.
ಈ ಕೃಷಿ ಮೇಳವನ್ನು ಕೊರೋನಾ ಕಾರಣದಿಂದ ಭೌತಿಕವಾಗಿ ಮತ್ತು ಡಿಜಿಟಲ್ ಮಾಧ್ಯಮ ಬಳಸಿ ಆಯೋಜನೆ ಮಾಡಲು ತೀರ್ಮಾನ ಕೈಗೊಂಡಿರುವುದಾಗಿ ಕೃಷಿ ವಿವಿಯ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಮೂರು ದಿನಗಳ ಕಾಲ ನಡೆಯಲಿರುವ ಈ ಕೃಷಿ ಮೇಳವನ್ನು ಡಿಜಿಟಲ್ ಮಾಧ್ಯಮದ ಮೂಲಕ ನೇರ ಪ್ರಸಾರ ಮಾಡುವುದಾಗಿಯೂ ಆಯೋಜಕರು ಮಾಹಿತಿ ನೀಡಿದ್ದಾರೆ. ಕೃಷಿ ವಿವಿಯ ವೆಬ್ಸೈಟ್, ಯೂಟ್ಯೂಬ್, ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾ, ವಾಟ್ಸಾಪ್, ಝೂಮ್ಗಳ ಮೂಲಕ ಆಯೋಜನೆ ಮಾಡಲಾಗಿದ್ದು, ಇದರಲ್ಲಿಯೇ ರೈತರ ಮೂಲಕ ಸಂವಾದ, ಪ್ರಶ್ನೋತ್ತರ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಜಿಕೆವಿಕೆ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಸುಮಾರು 25 ಕ್ಕೂ ಅಧಿಕ ಮಂದಿ ತಜ್ಞರು, ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಬೆಳಗ್ಗೆ 10-11.30 ರ.ವರೆಗೆ ಪ್ರಾತ್ಯಕ್ಷಿಕೆ, ಮಳಿಗೆಗಳ ವೀಕ್ಷಣೆ, ಅಪರಾಹ್ನ 2-4 ಸಭೆ, ತಜ್ಞರ ಸಲಹೆಗಳನ್ನು ಝೂಮ್ ಆಪ್ ಮೂಲಕ ನಡೆಸಲಾಗುತ್ತದೆ. ಕಾರ್ಯಕ್ರಮದಲ್ಲಿ ನೂತನ ತಳಿಗಳ ಬಿಡುಗಡೆ, ರಾಜ್ಯ ಮಟ್ಟದ ಪ್ರಶಸ್ತಿ ವಿತರಣೆ ಗಳೂ ನಡೆಯಲಿವೆ ಎಂದು ಜಿಕೆವಿಕೆ ತಿಳಿಸಿದೆ.
ಈ ಕಾರ್ಯಕ್ರಮವನ್ನು ಕೃಷಿ ಮೇಳ ವೆಬ್ಸೈಟ್: www.krishimela2020uasb.com ಕೃಷಿ ವಿವಿ ವೆಬ್ಸೈಟ್: www.uasbangalore.edu.in ವಾಟ್ಸಾಪ್: http://wa.me/919482477812 ಟ್ವಿಟ್ಟರ್: http://twitter.com/BangaloreUas ಗಳಲ್ಲಿ ವೀಕ್ಷಣೆ ಮಾಡಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.