ಬೆಂಗಳೂರು: ಕೊನೆಗೂ ಬಹು ನಿರೀಕ್ಷಿತ ಆರ್ ಅರ್ ನಗರ, ಶಿರಾ ಕ್ಷೇತ್ರಗಳ ಮಿನಿ ಕುರುಕ್ಷೇತ್ರ ಕದನ ಉಪಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡು, ಫಲಿತಾಂಶ ಹೊರಬಿದ್ದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿದೆ. ಆರ್ ಆರ್ ನಗರದಲ್ಲಿ ಕಮಲ ಅರಳಿದೆ.
ಬಹುನಿರೀಕ್ಷಿತ ರಾಜರಾಜೇಶ್ವರಿ ನಗರದಲ್ಲಿ ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ 1,03,291 ಮತಗಳನ್ನು ಪಡೆದು ಗೆಲುವಿನ ಕಿರೀಟ ಧರಿಸಿದ್ದಾರೆ. ಇವರು ವಿರೋಧ ಪಕ್ಷದ ಅಭ್ಯರ್ಥಿಗಳನ್ನು ಸುಮಾರು 44,548 ಅಂತರದಲ್ಲಿ ಸೋಲಿಸುವ ಮೂಲಕ ಭಾರೀ ಮುನ್ನಡೆ ಸಾಧಿಸಿದ್ದಾರೆ. ಪ್ರಬಲ ಪೈಪೋಟಿ ಎಂದೇ ಬಿಂಬಿಸಲಾಗಿದ್ದ ಕಾಂಗ್ರೆಸ್ಸಿನ ಅಭ್ಯರ್ಥಿ ಕುಸುಮಾ ಕೈ 58,743 ಮತಗಳನ್ನು ಪಡೆದು ಪರಾಜಯಗೊಂಡಿದ್ದಾರೆ. ಜೆಡಿಎಸ್ನ ಕೃಷ್ಣಮೂರ್ತಿ 6,381 ಮತಗಳಿಗೆ ತೃಪ್ತಪಟ್ಟುಕೊಂಡಿದ್ದಾರೆ. ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಮುನಿರತ್ನ ಅವರ ಮನೆ ಮುಂದೆ ಅಭಿಮಾನಿಗಳ ವಿಜಯೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ.
ವಿರೋಧ ಪಕ್ಷಗಳ ಅಪಪ್ರಚಾರ, ಅನುಕಂಪದ ರಾಜಕಾರಣದ ನಡುವೆಯೂ ಅಭಿವೃದ್ಧಿ ಆಶಯಗಳ ಜೊತೆಗೆ ಆಡಳಿತ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿಯನ್ನು ಮತದಾರ ದೊಡ್ಡ ಮೊತ್ತದ ಅಂತರದಲ್ಲಿ ಗೆಲ್ಲಿಸಿದ್ದಾನೆ. ಆ ಮೂಲಕ ಬಿಜೆಪಿಯ ಆತ್ಮವಿಶ್ವಾಸವನ್ನು ಮತದಾರ ಮತ್ತಷ್ಟು ಹೆಚ್ಚಿಸಿದ್ದಾನೆ ಎಂದರೂ ಅತಿಶಯವಾಗಲಾರದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.