ನವದೆಹಲಿ: ದೇಶದ ಆರ್ಥಿಕತೆ ಬಲಪಡಿಸುವ ಉದ್ದೇಶ ಮತ್ತು ವಾಣಿಜ್ಯ ಉದ್ದೇಶವನ್ನಿಟ್ಟುಕೊಂಡು ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಗೆ ಅವಕಾಶ ನೀಡಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 19 ಕಲ್ಲಿದ್ದಲು ನಿಕ್ಷೇಪಗಳನ್ನು ಹರಾಜು ಪ್ರಕ್ರಿಯೆಗೆ ಒಳಪಡಿಸಿದ್ದು, ಇದರ ಬಿಡ್ಡಿಂಗ್ಗಾಗಿ ಖಾಸಗಿ ಕಂಪೆನಿಗಳಿಂದ ಹೆಚ್ಚಿನ ಪೈಪೋಟಿ ವ್ಯಕ್ತವಾಗಿದೆ. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 7 ಸಾವಿರ ಕೋಟಿ ರೂ. ಗಳಷ್ಟು ವಾರ್ಷಿಕ ಆದಾಯ ಹರಿದು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಈ ಪ್ರಕ್ರಿಯೆಯಿಂದ ಸುಮಾರು 69 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗಲಿದೆ. ನಿರುದ್ಯೋಗ ಸಮಸ್ಯೆಗೂ ಈ ಕ್ರಮ ಕೊಂಚ ಮಟ್ಟಿಗೆ ಪರಿಹಾರ ಒದಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ಜೂನ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 41 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ಈ ನಿಕ್ಷೇಪಗಳ ಪೈಕಿ 3 ನಿಕ್ಷೇಪಗಳಿಗೆ ಒಂದೇ ಬಿಡ್ ಸಲ್ಲಿಕೆ ಆಗಿದ್ದವು. ಉಳಿದ 38 ನಿಕ್ಷೇಪಗಳ ಪೈಕಿ 19 ನಿಕ್ಷೇಪಗಳ ಹರಾಜು ಪ್ರಕ್ರಿಯೆ ಸಹ ಯಶಸ್ವಿಯಾಗಿ ನಡೆದಿದೆ. ಇದರಲ್ಲಿ 42 ಸಂಸ್ಥೆಗಳು ಪಾಲ್ಗೊಂಡಿವೆ. ಈ ಬಿಡ್ ಗಳನ್ನು ತಮ್ಮದಾಗಿಸಿಕೊಂಡಿರುವ ಕಂಪೆನಿಗಳು ಇನ್ನನು ಕಾರ್ಯ ನಿರ್ವಹಿಸಲಿದ್ದು, ಆ ಬಳಿಕ ಸರ್ಕಾರದ ಆದಾಯದ ಮೂಲದ ವ್ಯಾಪ್ತಿ ಸಹ ಹೆಚ್ಚಾಗಲಿದೆ. ಮುಂದಿನ ದಿನಗಳಲ್ಲಿ ಕಲ್ಲಿದ್ದಲು ಆಮದನ್ನು ಸಹ ನಿಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.