ಗುವಾಹಟಿ: ಕೊರೋನಾ ಸಂಕಷ್ಟದ ನಡುವೆ ನ. 16 ರಿಂದ ತೊಡಗಿದಂತೆ ಅರುಣಾಚಲ ಪ್ರದೇಶದಲ್ಲಿ ಶಾಲಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೊರೋನಾದಿಂದ ರಕ್ಷಿಸಲು ಮತ್ತು ಮಕ್ಕಳಲ್ಲಿ ರಾಷ್ಟ್ರೀಯ ಭಾವನೆಗಳು ಹೆಚ್ಚಾಗುವಂತೆ ಮಾಡುವ ನಿಟ್ಟಿನಲ್ಲಿ ತ್ರಿವರ್ಣ ಮಾಸ್ಕ್ಗಳ ವಿತರಣೆಗೆ ಸರ್ಕಾರ ಮುಂದಡಿ ಇರಿಸಿದೆ.
ಇದಕ್ಕಾಗಿ ಸರ್ಕಾರ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಸುಮಾರು 60 ಸಾವಿರಗಳಷ್ಟು ತ್ರಿವರ್ಣ ಮಾಸ್ಕ್ಗಳನ್ನು ಖರೀದಿ ಮಾಡಿದೆ. ಈ ಮಾಸ್ಕ್ಗಳ ಬಳಕೆಯೂ ಸಹ ಗಡಿಯಲ್ಲಿನ ಶಾಲೆಗಳ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ರಾಷ್ಟ್ರೀಯತೆಯ ತಿಳುವಳಿಕೆಯನ್ನು ಹೆಚ್ಚಿಸುತ್ತದೆ ಎಂಬ ಅಭಿಪ್ರಾಯವನ್ನು ಸಹ ಸರ್ಕಾರ ಮಂಡಿಸಿದೆ. 10-12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲಾರಂಭ ಮಾಡಲು ಸರ್ಕಾರ ಮುಂದಾಗಿದೆ. ಈ ವಿದ್ಯಾರ್ಥಿಗಳಿಗೆ ತ್ರಿವರ್ಣ ಮಾಸ್ಕ್ಗಳನ್ನು ನೀಡುವುದಾಗಿ ಸರ್ಕಾರ ತಿಳಿಸಿದ್ದು, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಈ ಮಾಸ್ಕ್ ಗಳನ್ನು ಕ್ಲಪ್ತ ಸಮಯಕ್ಕೆ ಒದಗಿಸುವ ಜವಾಬ್ದಾರಿ ಹೊತ್ತುಕೊಂಡಿದೆ.
ಅರುಣಾಚಲ ಪ್ರದೇಶವನ್ನು ದ.ಟಿಬೆಟ್ನ ಭಾಗ ಎಂದು ಚೀನಾ ಹಲವು ಸಂದರ್ಭಗಳಲ್ಲಿ ಹೇಳುತ್ತಾ ಬಂದಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳಲ್ಲಿ ಭಾರತೀಯತೆಯ ಅರಿವು ಮೂಡಿಸಲು, ಇಂತಹ ಒಂದು ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.