ಬೆಂಗಳೂರು: ರಾಜ್ಯದ ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ @BJP4Karnataka ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು.
ಕೇಂದ್ರ ಹಾಗೂ @BSYBJP ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ.— Narendra Modi (@narendramodi) November 10, 2020
ತಮ್ಮ ಟ್ವೀಟ್ನಲ್ಲಿ ಕರ್ನಾಟಕದ ಶಿರಾ, ಆರ್ ಆರ್ ನಗರ ಗಳಲ್ಲಿ ಬಿಜೆಪಿಗೆ ಸಿಕ್ಕ ಜಯ ವಿಶೇಷವಾಗಿದೆ. ಕೇಂದ್ರ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಗಳ ಅಭಿವೃದ್ಧಿಯ ಆಡಳಿತದ ಮೇಲೆ ಜನರು ನಂಬಿಕೆ ಇರಿಸಿದ್ದಾರೆ. ಮತದಾರರು ನೀಡಿರುವ ಬೆಂಬಲ ಮತ್ತು ಕಾರ್ಯಕರ್ತರ ಅವಿರತ ಶ್ರಮಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದರು.
ಪ್ರಧಾನಿ ಮೋದಿ ಅವರ ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಕೇಂದ್ರದ ಪ್ರಧಾನಿ ಮೋದಿ ಸರ್ಕಾರದ ಮಾರ್ಗದರ್ಶನದ ಜೊತೆಗೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟು ಹೆಚ್ಚಿಸುವ ಭರವಸೆಯನ್ನು ನೀಡಿದ್ದಾರೆ. ಆ ಮೂಲಕ ಕರ್ನಾಟಕದ ಸುಧಾರಣೆಗೆ ಪೂರಕ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ತಿಳಿಸಿದ್ದಾರೆ.
Thank you Prime Minister Shri @narendramodi Ji. With your guidance, we will continue to pursue reforms and the path of development in Karnataka. https://t.co/dvj9TIWCu7
— B.S. Yediyurappa (@BSYBJP) November 11, 2020
ಜೊತೆಗೆ ಇದು ರಾಜ್ಯದ ಜನರ ಗೆಲುವು. ರಾಜ್ಯ ಬಿಜೆಪಿ ಸರ್ಕಾರದ ಮೇಲಿನ ಜನರ ಬೆಂಬಲ ಮತ್ತು ಭರವಸೆಯಿಂದಲೇ ಬಿಜೆಪಿ ಪಕ್ಷ ಗೆಲುವು ಕಂಡಿದೆ. ಕೊರೋನಾ ಸಾಂಕ್ರಾಮಿಕ ಮತ್ತು ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ನಿಭಾಯಿಸಿರುವ ಕ್ರಮವನ್ನು ಜನರು ಪುರಸ್ಕರಿಸಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಇದು ಪಕ್ಷದ ಗೆಲುವಲ್ಲ. ಬದಲಾಗಿ ಪ್ರತಿಯೊಬ್ಬ ನಾಗರಿಕರ ಗೆಲುವು ಎಂದು ಅವರು ತಿಳಿಸಿದ್ದಾರೆ.
ಇನ್ನು ರಾಜ್ಯದ ಉಪಚುನಾವಣೆಯ ಗೆಲುವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕನ್ನಡದಲ್ಲಿಯೇ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು.
ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ @BSYBJP ಜೀ, ಶ್ರೀ @nalinkateel & @BJP4Karnataka ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ.
ಪ್ರಧಾನಿ ಶ್ರೀ @narendramodi ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ.
— Amit Shah (@AmitShah) November 10, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.