ಬೆಂಗಳೂರು: ವಿಧಾನ ಪರಿಷತ್ನ 4 ಕ್ಷೇತ್ರಗಳಿಗೆ (2 ಶಿಕ್ಷಕರ ಕ್ಷೇತ್ರ, 2 ಪದವೀಧರ ಕ್ಷೇತ್ರ) ಅ. 28 ರಂದು ನಡೆದಿದ್ದ ಚುನಾವಣೆಯ, ಮೂರು ಕ್ಷೇತ್ರಗಳ ಮತ ಎಣಿಕೆ ಮುಗಿದಿದ್ದು, ಫಲಿತಾಂಶ ಹೊರಬಿದ್ದಿದೆ.
ಶಿಕ್ಷಕರ ಕ್ಷೇತ್ರದ ಚುನಾವಣಾ ಮತ ಎಣಿಕೆ ಕಾರ್ಯಕ್ಕೆ ಸಂಬಂಧ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಗುಲ್ಬರ್ಗ ವಿವಿಯ ಗಣಿತ ವಿಭಾಗದಲ್ಲಿ ನಡೆದಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ಜಿ ನಮೋಶಿ ಅವರು 10212 ಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಪಕ್ಷದ ಶರಣಪ್ಪ ಮಟ್ಟೂರ ಮತ್ತು ಜೆಡಿಎಸ್ ಪಕ್ಷದ ತಿಮ್ಮಯ್ಯ ಪುರ್ಲೆ ಅವರಿಗೆ ಸೋಲಾಗಿದೆ.
ಬೆಂಗಳೂರಿನ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದಿದ್ದು, ಬಿಜೆಪಿಯ ಪುಟ್ಟಣ್ಣ ಅವರು 2200 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಕಾಂಗ್ರೆಸ್ನ ಪ್ರವೀಣ್ ಪೀಟರ್, ಜೆಡಿಎಸ್ನ ಎ.ಪಿ ರಂಗನಾಥ್ ಪರಾಭವಗೊಂಡಿದ್ದಾರೆ. ಸತತ ನಾಲ್ಕನೇ ಬಾರಿಗೆ ಪುಟ್ಟಣ್ಣ ಅವರು ಗೆಲುವು ಸಾಧಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಇನ್ನು ಪದವೀದರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಧಾರವಾಡದ ಕೃಷಿ ವಿಜ್ಞಾನ ವಿವಿಯಲ್ಲಿ ನಡೆದಿದ್ದು, ಈ ಕ್ಷೇತ್ರಗಳಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್ ವಿ ಸಂಕನೂರ ಅವರು 23,857 ಮತಗಳನ್ನು ಪಡೆದು ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ನ ಕುಬೇರಪ್ಪ ಮತ್ತು ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರು ಪರಾಜಯಗೊಂಡಿದ್ದಾರೆ.
ಆಗ್ನೇಯ ಪದವೀದರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ವೇಳೆಗೆ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
ಒಟ್ಟಿನಲ್ಲಿ ವಿಧಾನ ಪರಿಷತ್ನ 4 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಮತ ಎಣಿಕೆ ಮುಗಿದಿರುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಸದ್ಯ ಎಲ್ಲರ ಚಿತ್ತ ಆಗ್ನೇಯ ಪದವೀದರ ಕ್ಷೇತ್ರದ ಫಲಿತಾಂಶದತ್ತ ನೆಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.