ನವದೆಹಲಿ: ಹಣಕಾಸು ಸಚಿವಾಲಯವು ಮಂಗಳವಾರ 14 ರಾಜ್ಯಗಳಿಗೆ 6,195.08 ಕೋಟಿ ರೂಪಾಯಿಗಳನ್ನು ತೆರಿಗೆ ಹಂಚಿಕೆಯಾಗಿ ಬಿಡುಗಡೆ ಮಾಡಿದೆ.
“15 ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸುಗಳ ಆಧಾರದ ಮೇಲೆ, ಸರ್ಕಾರವು 14 ರಾಜ್ಯಗಳಿಗೆ 6,195.08 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ” ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಕಚೇರಿ ಟ್ವೀಟ್ ನಲ್ಲಿ ತಿಳಿಸಿದೆ.
14 ರಾಜ್ಯಗಳೆಂದರೆ ಆಂಧ್ರಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ , ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ.
1,277 ಕೋಟಿ ರೂ.ಗಳ ಅನುದಾನದ ಅತ್ಯಧಿಕ ಮೊತ್ತವನ್ನು ಕೇರಳಕ್ಕೆ ಬಿಡುಗಡೆ ಮಾಡಲಾಗಿದ್ದು, ನಂತರ 952 ಕೋಟಿ ರೂ. ಹಿಮಾಚಲ ಮತ್ತು ಪಂಜಾಬ್ಗೆ 638 ಕೋಟಿ ರೂ.ಬಿಡುಗಡೆ ಮಾಡಲಾಗಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪರಿಹಾರದ ಕೊರತೆಗಾಗಿ ವಿಶೇಷ ವಿಂಡೋದ ಎರಡನೇ ಹಂತದ ಭಾಗವಾಗಿ ಸರ್ಕಾರವು 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 6,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ ನಂತರ ಆದಾಯ ಕೊರತೆ ಅನುದಾನದ ಇತ್ತೀಚಿನ ಕಂತು ಬಿಡುಗಡೆ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
Based on the 15th Finance Commission interim recommendations, the Govt has released Rs 6,195.08 crore to 14 states on account of the eighth equated monthly installment of Post Devolution Revenue Deficit Grant. Details of the release: pic.twitter.com/VHUPZj06sT
— NSitharamanOffice (@nsitharamanoffc) November 10, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.