ಉಡುಪಿ: ನೋಂದಾಯಿತ ಗೋಶಾಲೆಗಳು ಆರ್ಥಿಕ ನೆರವು ಪಡೆಯುವ ಯೋಜನೆಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದೆ. ಭಾರತದಾದ್ಯಂತ ಅನೇಕ ಧಾರ್ಮಿಕ ಮಠಗಳು ಹಸುಗಳಿಗೆ ಆಶ್ರಯವನ್ನು ನೀಡಲು ಗೋಶಾಲೆಗಳನ್ನು ಸ್ಥಾಪಿಸುತ್ತಿವೆ. ಇವುಗಳಿಗೆ ಆರ್ಥಿಕ ನೆರವು ಒದಗಿಸಲು 900 ಕೋಟಿ ರೂ.ಗಳನ್ನು ಈ ಯೋಜನೆಯಡಿ ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನವದೆಹಲಿಯಲ್ಲಿ ಮಂಗಳವಾರ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಜಾಗತಿಕ ಸಾಂಕ್ರಾಮಿಕ ಪ್ರೇರಿತ ಲಾಕ್ಡೌನ್ ವಿಧಿಸಿದ್ದ ಆಗಸ್ಟ್ನಲ್ಲಿ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದ ಸ್ವಾಮೀಜಿಗಳು, ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಗೋಶಾಲೆಗಳ ಪಾಲನೆಗಾಗಿ ಕನಿಷ್ಠ 200 ಕೋಟಿ ರೂ.ಗಳನ್ನು ಮೀಸಲಿಡಬೇಕೆಂದು ಒತ್ತಾಯಿಸಿದ್ದರು. ಮಂಗಳವಾರ ವಿತ್ತ ಸಚಿವೆಯ ಭೇಟಿಯ ಸಮಯದಲ್ಲಿ ಸ್ವಾಮೀಜಿಗಳು ಈ ವಿಷಯವನ್ನು ವಿವರಿಸಿದರು ಮತ್ತು ಪತ್ರದ ಬಗ್ಗೆ ಅವರಿಗೆ ನೆನಪಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹಣಕಾಸು ಸಚಿವಾಲಯ ಈಗಾಗಲೇ 900 ಕೋಟಿ ರೂ.ಗಳನ್ನು ಸಂಬಂಧಪಟ್ಟ ಸಚಿವಾಲಯಕ್ಕೆ ವರ್ಗಾಯಿಸಿದೆ ಎಂದು ಹೇಳಿದೆ.
ನೋಂದಾಯಿತ ಗೋ ಶಾಲೆಗಳಿಗೆ ಈ ಮೊತ್ತವನ್ನು ರಾಜ್ಯ ಸರ್ಕಾರಗಳ ಮೂಲಕ ಕಳುಹಿಸಲಾಗುತ್ತದೆ. ಗೋಶಾಲೆಗಳಿಗೆ ಈ ಆರ್ಥಿಕ ನೆರವು ದೊರೆಯುವುದನ್ನು ಹಣಕಾಸು ಸಚಿವಾಲಯ ಖಚಿತಪಡಿಸುತ್ತದೆ ಎಂದು ನಿರ್ಮಲಾ ಹೇಳಿದ್ದಾರೆ. ನಿಧಿಯ ವಿತರಣೆಯಲ್ಲಿ ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ವಿವರಿಸಿದರು. ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ತಮ್ಮ ಕೋರಿಕೆಯ ಮೇರೆಗೆ ನಡೆದ ಈ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.