ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಕರೋನವೈರಸ್ ಪೀಡಿತ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತೊಂದು ಸುತ್ತಿನ ಆರ್ಥಿಕತೆ ಉತ್ತೇಜಕ ಪ್ಯಾಕೇಜ್ ಅನ್ನು ಪ್ರಕಟಿಸಿದ್ದಾರೆ.
ಕೋವಿಡ್-19 ಪುನಶ್ಚೇತನ ಹಂತದಲ್ಲಿ ಹೊಸ ಉದ್ಯೋಗಗಳ ಸೃಷ್ಟಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹೊಸ ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಯನ್ನು ಘೋಷಿಸಿದೆ. ಇದರಡಿ ಹೊಸ ಉದ್ಯೋಗಕ್ಕೆ ಕೇಂದ್ರ ಸರ್ಕಾರ ಸಹಾಯಧನ ನೀಡಲಿದೆ.
ವಸತಿ ರಿಯಲ್ ಎಸ್ಟೇಟ್ ಬೇಡಿಕೆಯನ್ನು ಹೆಚ್ಚಿಸುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಡೆವಲಪರ್ಗಳು ಮತ್ತು ಮನೆ ಖರೀದಿದಾರರಿಗೆ ಆದಾಯ ತೆರಿಗೆ ಪರಿಹಾರವನ್ನು ಘೋಷಿಸಿದ್ದಾರೆ.
ಪಿಎಂ ಆವಾಸ್ ಯೋಜನೆಯಡಿ ನಗರ ಪ್ರದೇಶಗಳ ಜನರಿಗೆ ನೀಡಲು 18 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡುವುದಾಗಿ ನಿರ್ಮಲಾ ಹೇಳಿದ್ದಾರೆ.
ಹೊಸ ಉದ್ಯೋಗಗಳಿಗೆ ಎರಡು ವರ್ಷಗಳವರೆಗೆ ನಿವೃತ್ತಿ ನಿಧಿಯಡಿ ಕೊಡುಗೆ ನೀಡಲು ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡಲಿದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.
ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡು ಯೋಜನೆಯನ್ನು ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ತರಲಾಗುತ್ತದೆ ಎಂದಿದ್ದಾರೆ.
ದೇಶದ ರೈತರಿಗೆ ಹೆಚ್ಚುವರಿ ತುರ್ತು ಕಾರ್ಯ ಸಂಗ್ರಹ ನಿಧಿಯಿಂದ ನಬಾರ್ಡ್ ಮೂಲಕ 25 ಸಾವಿರ ಕೋಟಿ ರೂಪಾಯಿಗಳನ್ನು ವಿತರಣೆ ಮಾಡಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡು ಮೂಲಕ ರೈತರಿಗೆ 2.5 ಕೋಟಿ ರೂಪಾಯಿಗಳನ್ನು, 1.4 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ವಿನಿಮಯ ಮಾಡಲಾಗಿದೆ ಎಂದಿದ್ದಾರೆ.
ಜಿಎಸ್ಟಿ ಸಂಗ್ರಹವು ಅಕ್ಟೋಬರ್ನಲ್ಲಿ 5 1.05 ಲಕ್ಷ ಕೋಟಿಯಾಗಿತ್ತು, ಇದು ವರ್ಷದಿಂದ ವರ್ಷಕ್ಕೆ 10% ಹೆಚ್ಚಾಗಿದೆ. ಎಫ್ಡಿಐ ಒಳಹರಿವು ಏಪ್ರಿಲ್-ಆಗಸ್ಟ್ನಲ್ಲಿ$35.37 ಬಿಲಿಯನ್ ಆಗಿದ್ದು, 13% ಹೆಚ್ಚಾಗಿದೆ ಎಂದು ನಿರ್ಮಲಾ ಹೇಳಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬ್ಯಾಂಕ್ ಸಾಲದ ಬೆಳವಣಿಗೆ ಸುಧಾರಿಸಿದೆ, ವರ್ಷದಿಂದ ವರ್ಷಕ್ಕೆ 5.1% ಹೆಚ್ಚಾಗಿದೆ (ಅಕ್ಟೋಬರ್ 23 ರಂತೆ) ಎಂದಿದ್ದಾರೆ.
ಪಿಎಂ ಸ್ಟೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯಡಿ, 26.32 ಲಕ್ಷ ಸಾಲ ಅರ್ಜಿಗಳು ಬಂದಿ ವೆ, 13.78 ಲಕ್ಷ ಸಾಲಗಳು (37 1,373.33 ಕೋಟಿ) 30 ರಾಜ್ಯಗಳಲ್ಲಿ ಮತ್ತು ಆರು ಯುಟಿಗಳಲ್ಲಿ ಮಂಜೂರಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.