ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮ ಮಂದಿರದಲ್ಲಿ ವಿಶೇಷವಾದ ಎರಡು ರೀತಿಯ ರಚನೆಗಳನ್ನು ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲನೆ ಮಾಡುವಂತೆ ತಜ್ಞರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ.
ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಸಭೆಯಲ್ಲಿ ಈ ವಿಚಾರವನ್ನು ತಜ್ಞರ ಮುಂದಿಟ್ಟಿದ್ದಾರೆ.
ರಾಮನವಮಿಯ ದಿನದಂದು ಸೂರ್ಯನ ಕಿರಣಗಳು ನೇರವಾಗಿ ರಾಮನ ವಿಗ್ರಹವನ್ನು ಸೋಕುವಂತೆ ಗರ್ಭ ಗುಡಿಯ ವಿನ್ಯಾಸ ಮಾಡುವಂತೆ ಕೌನ್ಸಿಲ್ ಫಾರ್ ಇಂಡಸ್ಟ್ರಿಯಲ್ ರಿಸರ್ಚ್ಗೆ ನಿರ್ದೇಶನ ನೀಡಲಾಗಿದೆ. ರಾಮನಿಗೆ ನಮಸ್ಕಾರ ಮಾಡುವ ಸಂದರ್ಭದಲ್ಲಿ ಭಕ್ತರಿಗೆ ರಾಮನ ಪಾದವನ್ನೇ ಸ್ಪರ್ಶ ಮಾಡುತ್ತಿರುವಂತೆ ಅನುಭವ ನೀಡುವ 3ಡಿ ತಂತ್ರಜ್ಞಾನ ರಚನೆಗೆ ಅವಕಾಶ ಇದೆಯೇ ಎಂದು ಪರಿಶೀಲಿಸುವಂತೆ ಮೋದಿ ಅವರು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಭಾಗವಹಿಸಿದ್ದವರೂ ಮೋದಿ ಅವರು ಹೇಳಿರುವ ಈ ಎರಡು ಅಂಶಗಳಿಗೆ ಅನುಮೋದನೆ ನೀಡಿದ್ದಾರೆ. ಅದರೊಂದಿಗೆ ಇತ್ತೀಚೆಗೆ ನಡೆಸಲಾದ ಸಭೆಯಲ್ಲಿ ಕೈಗೊಂಡ ಪ್ರಮುಖ ಪ್ರಸ್ತಾವನೆಗಳಿಗೂ ಅನುಮೋದನೆ ಸಲ್ಲಿಸಲಾಯಿತು. ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನ, ಅಯೋಧ್ಯೆಯ ಎಸ್ಬಿಐ ಬ್ಯಾಂಕ್ ಶಾಖೆಯನ್ನಷ್ಟೇ ರಾಮ ಮಂದಿರ ನಿರ್ಮಾಣ ಟ್ರಸ್ಟ್ಗೆ ಬಳಕೆ ಮಾಡುವುದು ಸೇರಿದಂತೆ ಇನ್ನಿತರ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.