ಬೆಂಗಳೂರು: ಸಂಪನ್ಮೂಲ ಸಂಗ್ರಹ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಣಯವೊಂದಕ್ಕೆ ಸಮ್ಮತಿ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಕೈಗಾರಿಕಾ ಭೂಮಿಯ ನೋಂದಣಿ ಶುಲ್ಕ ಮತ್ತು 20 ಲಕ್ಷ ಕ್ಕಿಂತ ಕಡಿಮೆ ಮೌಲ್ಯದ ಫ್ಲ್ಯಾಟ್ಗಳ ನೋಂದಣಿ ಶುಲ್ಕ ದರವನ್ನು 2%ಕಗಳಷ್ಟು ಇಳಿಕೆ ಮಾಡಲು ನಿರ್ಧರಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಕೈಗಾರಿಕಾ ಭೂಪ್ರದೇಶಗಳ ನೋಂದಣಿ ಶುಲ್ಕ ದರ 5% ಗಳಷ್ಟು ಇದೆ. ಈ ದರವನ್ನು 3% ಗೆ ಇಳಿಕೆ ಮಾಡಲಾಗುವುದು. ಹಾಗೆಯೇ, 20 ಲಕ್ಷ ರೂ. ಗಳಿಗಿಂತ ಕಡಿಮೆ ಮೌಲ್ಯದ ಫ್ಲ್ಯಾಟ್ಗಳ ನೋಂದಣಿ ಶುಲ್ಕವನ್ನು ಸಹ 3% ಗೆ ಇಳಿಕೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ಕ್ರಮದಿಂದಾಗಿ ಮುಂದಿನ ದಿನಗಳಲ್ಲಿ ನೋಂದಣಿಯ ಪ್ರಮಾಣ ರಾಜ್ಯದಲ್ಲಿ ಏರಿಕೆಯಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಭೆಯಲ್ಲಿ ರಾಜ್ಯದಲ್ಲಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಣಯಗಳನ್ನು ತೆಗೆದುಕೊಂಡಿಲ್ಲ ಎಂದು ಮಾಧುಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.