ನವದೆಹಲಿ: ಲಡಾಖ್ ಗಡಿಯಿಂದ ಭಾರತ ಮತ್ತು ಚೀನಾ ತಮ್ಮ ಸೇನಾ ಪಡೆಗಳನ್ನು ವಾಪಸ್ಸು ಕರೆಸಿಕೊಳ್ಳುವ ಸಂಬಂಧ ಮಾತುಕತೆ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪೂರ್ವ ಲಡಾಖ್ನ ಗಡಿ ಭಾಗದಲ್ಲಿ ಭಾರತ ಮತ್ತು ಚೀನಾ ನಡುವೆ ಘರ್ಷಣೆ ಏರ್ಪಟ್ಟ ಬಳಿಕ ಉಭಯ ರಾಷ್ಟ್ರಗಳೂ ಪ್ರದೇಶದಲ್ಲಿ ತಮ್ಮ ಸೇನಾಪಡೆಗಳನ್ನು ನಿಯೋಜನೆ ಮಾಡಿವೆ. ಆದರೆ ಉಭಯ ದೇಶಗಳು ಸಂಘರ್ಷ ಪೀಡಿತ ಪ್ರದೇಶದಲ್ಲಿನ ತಮ್ಮ ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಕ್ಕೆ ಒಪ್ಪಿಕೊಂಡಿವೆ ಎಂಬ ಮಾತುಗಳೂ ಈ ನಡುವೆ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಅನುರಾಗ್ ಶ್ರೀವಾಸ್ತವ್ ಅವರು ಈ ಸಂಬಂಧ ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿಗಳನ್ನು ಹಂಚಿಕೊಳ್ಳುವುದಿದ್ದರೂ ನಾವು ತಿಳಿಸುತ್ತೇವೆ. ಈ ಸಂಬಂಧ ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂಬುದಾಗಿ ಶ್ರೀವಾಸ್ತವ್ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸರ್ಕಾರಿ ಮೂಲಗಳು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ಬಿಡುಗಡೆ ಮಾಡಿದ್ದು, ಸೇನಾಪಡೆಗಳನ್ನು ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳು ಮೂರು ಹಂತಗಳ ಪ್ರಕ್ರಿಯೆಗೆ ಒಪ್ಪಿಕೊಂಡಿವೆ. ಸಂದರ್ಭಕ್ಕೆ ಅನುಗುಣವಾಗಿ ಸಂಘರ್ಷ ಪೀಡಿತ ಸ್ಥಳದಿಂದ ಸೇನೆ, ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲು ಮುಂದಾಗಿರುವುದಾಗಿ ತಿಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.