ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಡಿ ಕಳೆದೊಂದು ವರ್ಷದಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಗಳ ಅಭಿವೃದ್ಧಿಗೆ 400 ಕೋಟಿ ರೂ. ಗಳನ್ನು ಬಳಕೆ ಮಾಡವ ಮೂಲಕ ಇಲಾಖೆ ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಅಲ್ಪಸಂಖ್ಯಾತ ಕಲ್ಯಾಣ ಹಜ್ ಮತ್ತು ವಕ್ಫ್ ಹಾಗೂ ಪಶುಸಂಗೋಪನ ಇಲಾಖೆಗಳ ಒಂದು ವರ್ಷದ ಅಭಿವೃದ್ಧಿಯ ವರುಷದ ಹರುಷ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಕ್ರೈಸ್ತ ಸಮುದಾಯದ ಅಭ್ಯುದಯಕ್ಕಾಗಿ 68 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ವೆಚ್ಚ ಮಾಡಿದೆ. ಅವರಿಗೆ ಸಮುದಾಯ ಭವನ, ಚರ್ಚ್ ನವೀಕರಣ, ಸ್ಮಶಾನ ಅಭಿವೃದ್ಧಿ, ಅನಾಥಾಶ್ರಮಗಳು, ವೃದ್ಧಾಶ್ರಮಗಳ ಅಭಿವೃದ್ಧಿ ಮಾಡಲು ಪೂರಕ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದಂತೆ 152 ಕೋಟಿ ರೂ. ಸಾಲ ಒದಗಿಸಲಾಗಿದೆ. ಅಲ್ಲದೆ ಬೌದ್ಧ, ಜೈನ, ಸಿಖ್ಖ್ ಸಮುದಾಯಗಳ ಅಭಿವೃದ್ಧಿ ಯೋಜನೆಯಡಿ ಆರು ಸಂಸ್ಥೆಗಳು ಮತ್ತು ಅನೇಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 26 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಬಳಕೆ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬೀದರ್ನಲ್ಲಿನ ಗುರುನಾನಕ ಝರಾ ಗುರು ದ್ವಾರಕ್ಕೆ 10 ಕೋಟಿ, ಬೆಂಗಳೂರಿನ ಗುರು ದ್ವಾರಕ್ಕೆ 25 ಕೋಟಿ ರೂ. ಗಳನ್ನು ಮಂಜೂರು ಮಾಡಲಾಗಿದೆ.
ಬಿದಾಯಿ ಯೋಜನೆಯ ಫಲಾನುಭವಿಗಳಿಗೆ 130 ಕೋಟಿ ರೂ. ಸಹಾಯ ಧನ ವಿತರಣೆ ಮಾಡಲಾಗಿದೆ. ಕೇಂದ್ರದ ಅಲ್ಪಸಂಖ್ಯಾತರ ಮಂತ್ರಾಲಯ ವತಿಯಿಂದ ಪ್ರಧಾನಮಂತ್ರಿ ಜನವಿಕಾಸ ಯೋಜನೆಯ ಅನುದಾನ 300 ಕೋಟಿ ರೂ.ಗಳಿಗೆ ಅನುಮೋದನೆ ದೊರೆತಿದ್ದು, ಈ ಪೈಕಿ 221 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದರಲ್ಲಿ 167 ಕೋಟಿ ರೂ. ಗಳನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿರುವುದಾಗಿಯೂ ತಿಳಿಸಿದ್ದಾರೆ.
ಪಶುಪಾಲನಾ ಇಲಾಖೆಗೆ ಸಂಬಂಧಿಸಿದಂತೆ ಸಹ ಅನೇಕ ಅಭಿವೃದ್ಧಿ ಕಾರ್ಯಗಳನ್ನು ರಾಜ್ಯದಲ್ಲಿ ನಡೆಸಲಾಗಿದೆ. ಕೋಳಿ ಸಾಕಾಣಿಕೆ ಮಾಡುವವರಿಗೆ ಕೋಳಿ ವಿತರಣೆ, ಕುರಿ, ಮೇಕೆಗಳ ಮಾಲೀಕರಿಗೆ ಸಹಾಯಧನ ವಿತರಣೆ, ಗೋಶಾಲೆಗಳಿಗೆ ಅನುದಾನ ವಿತರಣೆ ಸೇರಿದಂತೆ ಇನ್ನಿತರ ಜನೋಪಯೋಗಿ ಕೆಲಸಗಳನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.