ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ. ಮುಂದಿನ ಮೂರು ವಾರಗಳಲ್ಲೇ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸುವಂತೆಯೂ ರಾಜ್ಯ ಚುನಾವಣಾ ಆಯೋಗಕ್ಕೆ ಕೋರ್ಟ್ ನಿರ್ದೇಶಿಸಿದೆ.
ಅವಧಿ ಮುಗಿದ ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಸಬೇಕು. ಇದರಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಬದಲಾಗಿ ಚುನಾವಣಾ ಆಯೋಗವೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಮುಗಿಸುವಂತೆ ಸೂಚಿಸಿದೆ. ರಾಜ್ಯದಲ್ಲಿ 5800 ಗ್ರಾ. ಪಂ. ಚುನಾವಣೆಗಳನ್ನು ನಡೆಸಲು ಇನ್ನು ಮೂರು ವಾರಗಳಲ್ಲಿಯೇ ವೇಳಾಪಟ್ಟಿ ಪ್ರಕಟಿಸುವಂತೆ ಸೂಚಿಸಿದೆ.
ಅಲ್ಲದೆ ಈ ಸಂಬಂಧ ಸಿಬ್ಬಂದಿಗಳ ಕೊರತೆ ಇದ್ದಲ್ಲಿ, ರಾಜ್ಯಪಾಲರ ಗಮನಕ್ಕೆ ತರುವಂತೆಯೂ ಚು. ಆಯೋಗಕ್ಕೆ ಕೋರ್ಟ್ ತಿಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಗ್ರಾ. ಪಂ ಚುನಾವಣೆಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.