ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಳೆದ 5 ತಿಂಗಳಿನಿಂದ ವೇತನವಿಲ್ಲದೇ ಪರದಾಡುತ್ತಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದೆ.
ಅತಿಥಿ ಉಪನ್ಯಾಸಕರ ಬಾಕಿ ಇದ್ದ 5 ತಿಂಗಳ ವೇತನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅತಿಥಿ ಉಪನ್ಯಾಸಕರ ಆರ್ಥಿಕ ಭದ್ರತೆ ಮತ್ತು ಕಾಳಜಿಯ ಹಿತದೃಷ್ಟಿಯಿಂದ ಸರ್ಕಾರ ಈ ಹಣವನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು, ಅತಿಥಿ ಉಪನ್ಯಾಸಕರ 5 ತಿಂಗಳ ಬಾಕಿ ವೇತನವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ಆರ್ಥಿಕ ಭದ್ರತೆ ಮತ್ತು ಹಿತರಕ್ಷಣೆಗೆಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
📣
ಅತಿಥಿ ಉಪನ್ಯಾಸಕರ 5 ತಿಂಗಳ ಬಾಕಿ ವೇತನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಲಾಗಿದೆ. ಅತಿಥಿ ಉಪನ್ಯಾಸಕರ ಆರ್ಥಿಕ ಭದ್ರತೆ ಹಾಗೂ ಹಿತರಕ್ಷಣೆಗೆ ಮುಖ್ಯಮಂತ್ರಿ ಶ್ರೀ @BSYBJP ಅವರ ನೇತೃತ್ವದ ನಮ್ಮ ಸರ್ಕಾರ ಸದಾ ಬದ್ಧವಾಗಿದೆ.@CMofKarnataka @KarnatakaVarthe
— Dr. Ashwathnarayan C. N. (@drashwathcn) November 13, 2020
ಒಟ್ಟಿನಲ್ಲಿ ಕೊರೋನಾ ಸಂಕಷ್ಟದಿಂದ ತೊಂದರೆಗೊಳಗಾಗಿದ್ದ ಅತಿಥಿ ಉಪನ್ಯಾಸಕರಿಗೆ ದೀಪಾವಳಿ ಸಂದರ್ಭದಲ್ಲಿ ಸರ್ಕಾರ ನಿರಾಳತೆ ಒದಗಿಸಿದೆ ಎಂದರೆ ತಪ್ಪಾಗಲಾರದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.