ಮೈಸೂರು: ನಗರದಲ್ಲಿ ಸ್ವಂತ ಸೂರಿನ ಕನಸು ಹೊಂದಿರುವ ಬಡವರಿಗೆ ಪೂರಕವಾಗುವಂತೆ, ಭೂಮಾಲೀಕರಿಗೆ ‘ಸಾಂತ್ವನ’ ನಿವೇಶನಗಳ ಹಂಚಿಕೆ ಕಾರ್ಯಕ್ರಮ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಇಂದು ನಡೆಯಿತು.
ನೆನೆಗುದಿಗೆ ಬಿದ್ದಿದ್ದ ಮೈಸೂರಿನ ಇಲವಾಲ, ಕೆ ಆರ್ ಎಸ್ ನಿಸರ್ಗ ಬಡಾವಣೆಗೆ ಮರುಜೀವ ತುಂಬಿ, ಈ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರಿಗೆ ವಸತಿ ಸಚಿವ ಸೋಮಣ್ಣ ಅವರು ಸಾಂತ್ವನ ನಿವೇಶನಗಳ ಹಂಚಿಕೆ ಪತ್ರಗಳನ್ನು ವಿತರಣೆ ಮಾಡಿದರು.
ರಾಜ್ಯದಲ್ಲಿ ವಸತಿ ವ್ಯವಸ್ಥೆ ಹೊಂದಿರದ ನಾಗರಿಕರಿಗೆ ಸ್ವಂತ ಮನೆಗಳನ್ನು ಹೊಂದುವುದಕ್ಕೆ ಪೂರಕವಾಗಿ ಕರ್ನಾಟಕ ಸರ್ಕಾರದ ಅನೇಕ ವಸತಿ ಯೋಜನೆಗಳಲ್ಲಿ ಸಾಂತ್ವನ ಯೋಜನೆಯೂ ಒಂದಾಗಿದೆ. ಈ ಯೋಜನೆಯನ್ವಯ ವಸತಿ ಯೋಜನೆಗಳನ್ನು ರೂಪಿಸಿ ಕರ್ನಾಟಕ ಗೃಹ ಮಂಡಳಿಯ ಮೂಲಕ ಫಲಾನುಭವಿಗಳಿಗೆ ಹಂಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಈ ಸಂದರ್ಭದಲ್ಲಿ ಗೃಹ ಮಂಡಳಿಯ ಅಧ್ಯಕ್ಷರ ಅರಗ ಜ್ಞಾನೇಂದ್ರ, ಶಾಸಕರು, ಸಂಸದರು, ಆಯುಕ್ತರು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ವಸತಿ ಇಲಾಖೆಯು ಕರ್ನಾಟಕ ಗೃಹ ಮಂಡಳಿ ವತಿಯಿಂದ ಮೈಸೂರಿನ ಇಲವಾಲ ಹೋಬಳಿಯ KRS ನಿಸರ್ಗ ಬಡಾವಣೆಯಲ್ಲಿ ಆಯೋಜಿಸಿದ್ದ ಭೂ ಮಾಲೀಕರಿಗೆ ಸಾಂತ್ವನ ನಿವೇಶನಗಳ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹಂಚಿಕೆ ಪತ್ರಗಳನ್ನು ವಿತರಿಸಲಾಯಿತು. ಗೃಹ ಮಂಡಳಿ ಅಧ್ಯಕ್ಷರು, ಶಾಸಕರು, ಸಂಸದರು, ಆಯುಕ್ತರು ಮತ್ತು ಇತರೆ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/K2SVdyAOkr
— V. Somanna (@VSOMANNA_BJP) November 13, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.